ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ: ಉಳಿಕೆ ಪಂದ್ಯಗಳಿಗೆ ಬೂಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಗೆ ಸ್ಥಾನ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡಿರುವ ಜಸ್ಪ್ರೀತ್ ಬೂಮ್ರಾ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅವರನ್ನು ಟೀಂ ಇಂಡಿಯಾ ಆಯ್ಕೆದಾರರ ಸಮಿತಿ ನೇಮಕ ಮಾಡಿದೆ.
ಮೊಹಮ್ಮದ್ ಸಿರಾಜ್
ಮೊಹಮ್ಮದ್ ಸಿರಾಜ್
Updated on

ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡಿರುವ ಜಸ್ಪ್ರೀತ್ ಬೂಮ್ರಾ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅವರನ್ನು ಟೀಂ ಇಂಡಿಯಾ ಆಯ್ಕೆದಾರರ ಸಮಿತಿ ನೇಮಕ ಮಾಡಿದೆ.

ಬೂಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ಪ್ರಸ್ತುತ ಅವರು ಬಿಸಿಸಿಐ ವೈದ್ಯಕೀಯ ತಂಡದ ನಿಗಾವಣೆಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

ಗುವಾಹಟಿಯಲ್ಲಿ ಭಾನುವಾರ ಎರಡನೇ ಟಿ-20 ಹಾಗೂ ಇಂದೋರ್ ನಲ್ಲಿ ಮಂಗಳವಾರ ಮೂರನೇ ಟಿ-20 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 16 ರಿಂದ ಆರಂಭವಾಗಲಿರುವ ಟಿ-20 ವಿಶ್ವಕಪ್ ಟೂರ್ನಿಯಿಂದಲೂ ಜಸ್ಪ್ರೀತ್ ಬೂಮ್ರಾ ಹೊರಗೆ ಇರುವ ಸಾಧ್ಯತೆಯಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com