ಮೊಹಮ್ಮದ್ ಶಮಿ-ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ
ಮೊಹಮ್ಮದ್ ಶಮಿ-ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ

ಅರ್ಜುನ ಪ್ರಶಸ್ತಿಗೆ ಮೊಹಮ್ಮದ್ ಶಮಿ, ಖೇಲ್ ರತ್ನ ಪ್ರಶಸ್ತಿಗೆ ಸಾತ್ವಿಕ್-ಚಿರಾಗ್ ಶೆಟ್ಟಿ ನಾಮನಿರ್ದೇಶನ

ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇತ್ತೀಚೆಗೆ ನಡೆದ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಶಮಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ನವದೆಹಲಿ: ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇತ್ತೀಚೆಗೆ ನಡೆದ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಶಮಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದಲ್ಲದೆ, ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಕ್ರೀಡಾ ಸಚಿವಾಲಯದ ಮೂಲಗಳ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶಮಿ ಹೆಸರನ್ನು ಪಟ್ಟಿಯಲ್ಲಿ ಸೇರಿಸಲು ವಿಶೇಷ ವಿನಂತಿಯನ್ನು ಮಾಡಿದೆ. ಈ ಹಿಂದೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಿರಲಿಲ್ಲ. ಶಮಿ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದರು.

ಶಮಿ ಹೊರತುಪಡಿಸಿ 16 ಆಟಗಾರರು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇವರಲ್ಲಿ ಪುರುಷರ ಹಾಕಿ ಆಟಗಾರರಾದ ಕೃಷ್ಣ ಬಹದ್ದೂರ್ ಪಾಠಕ್ ಮತ್ತು ಸುಶೀಲಾ ಚಾನು, ಬಿಲ್ಲುಗಾರರಾದ ಓಜಸ್ ಪ್ರವೀಣ್ ಡಿಯೋಟಾಲೆ ಮತ್ತು ಅದಿತಿ ಗೋಪಿಚಂದ್ ಸ್ವಾಮಿ, ಬಾಕ್ಸರ್ ಮೊಹಮ್ಮದ್ ಹುಸಾಮುದ್ದೀನ್, ಚೆಸ್ ಆಟಗಾರ್ತಿ ಆರ್ ವೈಶಾಲಿ, ಗಾಲ್ಫ್ ಆಟಗಾರ್ತಿ ದೀಕ್ಷಾ ದಾಗರ್, ಶೂಟರ್ ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್, ಕುಸ್ತಿಪಟು ಅನಂತ್ ಪಂಹಾಲ್ ಮತ್ತು ಕುಸ್ತಿಪಟು ಅನಂತ್ ಪಾಂಗ್ಹಾಲ್ ಸೇರಿದ್ದಾರೆ.

ಗಣೇಶ್ ಪ್ರಭಾಕರನ್ (ಮಲ್ಲಕಂಬ), ಮಹಾವೀರ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಲಲಿತ್ ಕುಮಾರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್) ಮತ್ತು ಶಿವೇಂದ್ರ ಸಿಂಗ್ (ಹಾಕಿ) ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಕವಿತಾ (ಕಬಡ್ಡಿ), ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್) ಮತ್ತು ವಿನೀತ್ ಕುಮಾರ್ ಶರ್ಮಾ (ಹಾಕಿ) ಧ್ಯಾನ್ ಚಂದ್ ಜೀವಮಾನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಈ ವರ್ಷದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಮತ್ತು ಅರ್ಜುನ ಪ್ರಶಸ್ತಿಯನ್ನು ನಿರ್ಧರಿಸಲು ಕ್ರೀಡಾ ಸಚಿವಾಲಯವು 12 ಸದಸ್ಯರ ಸಮಿತಿಯನ್ನು ರಚಿಸಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ಈ ಸಮಿತಿಯ ನೇತೃತ್ವ ವಹಿಸಿದ್ದರು. ಅವರಲ್ಲದೆ, ಹಾಕಿ ಆಟಗಾರ ಧನರಾಜ್ ಪಿಳ್ಳೆ, ಮಾಜಿ ಟೇಬಲ್ ಟೆನಿಸ್ ಆಟಗಾರ ಕಮಲೇಶ್ ಮೆಹ್ತಾ, ಮಾಜಿ ಬಾಕ್ಸರ್ ಅಖಿಲ್ ಕುಮಾರ್, ಮಹಿಳಾ ಶೂಟರ್ ಮತ್ತು ಪ್ರಸ್ತುತ ರಾಷ್ಟ್ರೀಯ ಕೋಚ್ ಶುಮಾ ಶಿರೂರ್, ಮಾಜಿ ಕ್ರಿಕೆಟಿಗ ಅಂಜುಮ್ ಚೋಪ್ರಾ, ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರಗುಂಡೆ ಮತ್ತು ಪವರ್‌ಲಿಫ್ಟರ್ ಫರ್ಮಾನ್ ಪಾಷಾ ಕೂಡ ಸಮಿತಿಯಲ್ಲಿದ್ದಾರೆ.

ವಿವಿಧ ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಂಡವರ ಪಟ್ಟಿ ಹೀಗಿದೆ:

ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ (ಬ್ಯಾಡ್ಮಿಂಟನ್).
ಅರ್ಜುನ ಪ್ರಶಸ್ತಿಗಳು: ಮೊಹಮ್ಮದ್ ಶಮಿ (ಕ್ರಿಕೆಟ್), ಅಜಯ್ ರೆಡ್ಡಿ (ದೃಷ್ಟಿ ವಿಕಲಚೇತನ ಕ್ರಿಕೆಟ್), ಓಜಸ್ ಪ್ರವೀಣ್ ಡಿಯೋಟಾಲೆ, ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಶೀತಲ್ ದೇವಿ (ಪ್ಯಾರಾ ಆರ್ಚರಿ), ಪಾರುಲ್ ಚೌಧರಿ ಮತ್ತು ಎಂ ಶ್ರೀಶಂಕರ್ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್. ವೈಶಾಲಿ (ಚೆಸ್), ದಿವ್ಯಾಕೃತಿ ಸಿಂಗ್ ಮತ್ತು ಅನುಷ್ ಅಗರ್ವಾಲ್ (ಕುದುರೆ ಸವಾರಿ), ದೀಕ್ಷಾ ದಾಗರ್ (ಗಾಲ್ಫ್), ಕೃಷ್ಣ ಬಹದ್ದೂರ್ ಪಾಠಕ್ ಮತ್ತು ಸುಶೀಲಾ ಚಾನು (ಹಾಕಿ), ಪಿಂಕಿ (ಲಾನ್ ಬಾಲ್), ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಅನಂತ್ ಪಂಘಲ್ ( ಕುಸ್ತಿ), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್). 

ಧ್ಯಾನ್ ಚಂದ್ ಜೀವಮಾನ ಪ್ರಶಸ್ತಿ: ಕವಿತಾ (ಕಬಡ್ಡಿ), ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್) ವಿನೀತ್ ಕುಮಾರ್ ಶರ್ಮಾ (ಹಾಕಿ).
ದ್ರೋಣಾಚಾರ್ಯ ಪ್ರಶಸ್ತಿ: ಗಣೇಶ್ ಪ್ರಭಾಕರನ್ (ಮಲ್ಲಖಾಂಬ್), ಮಹಾವೀರ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಲಲಿತ್ ಕುಮಾರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್), ಶಿವೇಂದ್ರ ಸಿಂಗ್ (ಹಾಕಿ).

Related Stories

No stories found.

Advertisement

X
Kannada Prabha
www.kannadaprabha.com