3ನೇ ಟಿ20: ಮಿಂಚಿದ ಟೀಂ ಇಂಡಿಯಾ ಯುವ ಕ್ರಿಕೆಟಿಗರು, ಲಂಕಾಗೆ 229 ರನ್ ಗಳ ಬೃಹತ್ ಗುರಿ

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ಲಂಕಾಗೆ ಭರ್ಜರಿ 229 ರನ್ ಗಳ ಗುರಿ ನೀಡಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on

ರಾಜ್ಕೋಟ್: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ಲಂಕಾಗೆ ಭರ್ಜರಿ 229 ರನ್ ಗಳ ಗುರಿ ನೀಡಿದೆ.

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಪೇರಿಸಿದ್ದು ಶ್ರೀಲಂಕಾಕ್ಕೆ 229 ರನ್‌ಗಳ ಬೃಹತ್ ಗುರಿ ನೀಡಿದೆ. 

ಸೂರ್ಯಕುಮಾರ್ ಯಾದವ್ ಭಾರತದ ಪರ ಗರಿಷ್ಠ 112 ರನ್ ಗಳಿಸಿದರು. ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಇಶಾನ್ ಕಿಶನ್ ಮೊದಲ ಓವರ್ ನಲ್ಲೇ ಪೆವಿಲಿಯನ್ ಗೆ ಮರಳಿದರು. ಇದಾದ ಬಳಿಕ ಕ್ರೀಸ್ ಗೆ ಬಂದ ರಾಹುಲ್ ತ್ರಿಪಾಠಿ ಅವಸರದಲ್ಲಿ 35 ರನ್ ಗಳಿಸಿದರು. ಇದರಿಂದಾಗಿ ಭಾರತ ಪವರ್‌ಪ್ಲೇಯಲ್ಲಿ ಎರಡು ವಿಕೆಟ್ ಕಳೆದುಕೊಂಡರೂ 53 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. 

ಇದಾದ ನಂತರ ಶುಭಮನ್ ಗಿಲ್ ಮತ್ತು ಸೂರ್ಯಕುಮಾರ್ ನಡುವೆ ಮೂರನೇ ವಿಕೆಟ್‌ಗೆ 53 ಎಸೆತಗಳಲ್ಲಿ 111 ರನ್ ಜೊತೆಯಾಟ ನೀಡಿದರು. ಗಿಲ್ 46 ರನ್ ಗಳಿಸಿ ಔಟಾದರು. ಹಾರ್ದಿಕ್ ಮತ್ತು ದೀಪಕ್ ತಲಾ 4 ರನ್ ಗಳಿಸಿ ಪೆವಿಲಿಯನ್‌ಗೆ ಸೇರಿದರು. ಸೂರ್ಯಕುಮಾರ್ ಅವರ ಅಮೋಘ ಶತಕದ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 228 ರನ್ ಗಳಿಸಿತು. ಅಕ್ಷರ್ ಪಟೇಲ್ 9 ಎಸೆತಗಳಲ್ಲಿ 21 ರನ್ ಗಳಿಸಿದರು.

ಲಂಕಾ ಪರ ಮಧಶಂಕಾ 2, ರಜಿತಾ, ಕರುಣರತ್ನೆ ಮತ್ತು ಡಿಸಿಲ್ವಾ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com