ಆಸೀಸ್ ವಿರುದ್ಧ ವಿಶ್ವಕಪ್ ಫೈನಲ್ ಪಂದ್ಯ: ಭಾರತ ಗೆದ್ದು ಬರಲಿ ಎಂದು ದೇಶಾದ್ಯಂತ ವಿಶೇಷ ಪೂಜೆ- ವಿಡಿಯೋ

ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಹಾರೈಸಿ ದೇಶಾದ್ಯಂತ ವಿಶೇಷ ಪೂಜೆ, ಹೋಮ, ಹವನ ಕಾರ್ಯಗಳು ನಡೆಯುತ್ತಿವೆ.
ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ
ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ

ಉತ್ತರ ಪ್ರದೇಶ: ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಹಾರೈಸಿ ದೇಶಾದ್ಯಂತ ವಿಶೇಷ ಪೂಜೆ, ಹೋಮ, ಹವನ ಕಾರ್ಯಗಳು ನಡೆಯುತ್ತಿವೆ.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತ್ರಿವರ್ಣ ಧ್ವಜದೊಂದಿಗೆ ಭಾರತದ 11 ಮಂದಿ ಆಟಗಾರರ ಫೋಟೋಗಳನ್ನು ನದಿ ಬಳಿಯಲ್ಲಿ ಹಿಡಿದುಕೊಂಡು ಫೈನಲ್ ನಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ಮಹಾರಾಷ್ಟ್ರದ ಪುಣೆಯಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಾಲಯದಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ಭಾರತ ಗೆಲುವಿಗಾಗಿ ಪ್ರಾರ್ಥಿಸಿ ವಿಶೇಷ ಆರತಿ ಬೆಳಗಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com