ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಬೌಲರ್ ಮೊಹಮ್ಮದ್​ ಶಮಿ

ಕಾರು ಅಪಘಾತಕ್ಕೀಡಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಟೀಂ ಇಂಡಿಯಾ ಬೌಲರ್ ಮೊಹಮ್ಮದ್​ ಶಮಿ ಮಾನವೀಯತೆ ಮೆರೆದಿದ್ದಾರೆ.
ಟೀಂ ಇಂಡಿಯಾ ಬೌಲರ್ ಮೊಹಮ್ಮದ್​ ಶಮಿ
ಟೀಂ ಇಂಡಿಯಾ ಬೌಲರ್ ಮೊಹಮ್ಮದ್​ ಶಮಿ

ನೈನಿತಾಲ್(ಉತ್ತರಾಖಂಡ): ಕಾರು ಅಪಘಾತಕ್ಕೀಡಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಟೀಂ ಇಂಡಿಯಾ ಬೌಲರ್ ಮೊಹಮ್ಮದ್​ ಶಮಿ ಮಾನವೀಯತೆ ಮೆರೆದಿದ್ದಾರೆ.

ಉತ್ತರಾಖಂಡದ ನೈನಿತಾಲ್​ನ ಕಣಿವೆಯೊಂದರಲ್ಲಿ ಕಾರೊಂದು ಅಪಘಾತಕ್ಕೀಡಾಗಿದ್ದನ್ನು, ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಶಮಿ ಗಮನಿಸಿದ್ದು, ಕಾರು ನಿಲ್ಲಿಸಿ ಸಹಾಯಹಸ್ತ ಚಾಚಿದ್ದಾರೆ.

ಘಟನೆಯ ವಿಡಿಯೋವನ್ನು ಶಮಿ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಸ್ತೆ ದಾಟಿ ಕಣಿವೆಗೆ ಬಿದ್ದ ಕಾರನ್ನು ವಿಡಿಯೋದಲ್ಲಿ ಕಾಣಬಹುದು. ಶಮಿ ಕಾರಲ್ಲಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದು ಉಪಚರಿಸುತ್ತಿರುವುದೂ ಇದೆ.

'ಆತ ತುಂಬಾ ಅದೃಷ್ಟಶಾಲಿ. ಭಗವಂತ ಮರುಜನ್ಮ ನೀಡಿದ್ದಾನೆ. ನೈನಿತಾಲ್​ ಬಳಿಯ ಕಣಿವೆಯಲ್ಲಿ ಕಾರು ಅಪಘಾತಕ್ಕೀಡಾಗಿತ್ತು. ನಾವು ಆತನನ್ನು ಸುರಕ್ಷಿತವಾಗಿ ಹೊರಗೆ ಕರೆತಂದೆವು' ಎಂದು ಬರೆದುಕೊಂಡಿದ್ದಾರೆ.

 
 
 
 
 
 
 
 
 
 
 
 
 
 
 

A post shared by

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com