ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ

ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು.
ಶುಭಮನ್ ಗಿಲ್ - ಶ್ರೇಯಸ್ ಅಯ್ಯರ್
ಶುಭಮನ್ ಗಿಲ್ - ಶ್ರೇಯಸ್ ಅಯ್ಯರ್

ಇಂದೋರ್: ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು.

ಮಧ್ಯಪ್ರದೇಶದ ಇಂದೋರ್​ನ ಹೋಲ್ಕರ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಶುಭಮನ್ ಗಿಲ್ 27 ಎಸೆತಗಳಲ್ಲಿ 32 ರನ್ ಗಳಿಸಿ ಅಜೇಯರಾಗುಳಿದರೆ, ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 8 ರನ್ ಗಳಿಸಿ ಔಟಾದರು. ನಂತರ ಬಂದ ಶ್ರೇಯಸ್ ಅಯ್ಯರ್ 20 ಎಸೆತಗಳಲ್ಲಿ ಔಟಾಗದೆ 34 ರನ್ ಗಳಿಸಿದ್ದಾರೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊಹಾಲಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 5 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ 2ನೇ ಪಂದ್ಯದ ಮೇಲೆ ಭಾರತ ಕಣ್ಣಿಟ್ಟಿದ್ದು, ಸದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ್ದಾನೆ. ತವರಿನಲ್ಲಿ ಸರಣಿ ಗೆಲ್ಲುವ ವಿಶ್ವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com