social_icon

'ನಮಗೆ ಲಕ್ಸುರಿ ಬೇಡ, ಆದರೆ..': ವಿಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ, BCCI ಗೆ ದೂರು!

ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Published: 02nd August 2023 02:38 PM  |   Last Updated: 02nd August 2023 03:48 PM   |  A+A-


Hardik Pandya Slams West Indies Cricket Board

ಹಾರ್ದಿಕ್ ಪಾಂಡ್ಯ

Posted By : Srinivasamurthy VN
Source : ANI

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಕಿಡಿಕಾರಿದ್ದಾರೆ. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ತಂಡದ ಆಟಗಾರರಿಗೆ ಸಾಮಾನ್ಯ ವ್ಯವಸ್ಥೆಗಳನ್ನೂ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: 3ನೇ ಏಕದಿನ ಪಂದ್ಯ: ಎಂಎಸ್ ಧೋನಿ ದಾಖಲೆ ಸರಿಗಟ್ಟಿದ ಇಶಾನ್ ಕಿಶನ್

ಟ್ರಿನಿಡಾಡ್ ನ ಬ್ರಿಯಾನ್‌ ಲಾರಾ ಕ್ರಿಕೆಟ್‌ ಅಕಾಡೆಮಿ ಸ್ಟೇಡಿಯಂನಲ್ಲಿ ಮಂಗಳವಾರ (ಆಗಸ್ಟ್‌ 1) ನಡೆದ ಏಕದಿನ ಕ್ರಿಕೆಟ್‌ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಅಧಿಕಾರಯುತ ಆಟವಾಡಿದ ಹಾರ್ದಿಕ್ ಪಾಂಡ್ಯ ಸಾರಥ್ಯದ ಭಾರತ ತಂಡ 200 ರನ್‌ಗಳ ಭಾರಿ ಅಂತರದಲ್ಲಿ ಆತಿಥೇಯ ವಿಂಡೀಸ್ ತಂಡವನ್ನು ಮಣಿಸಿ, 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

ಈ ಪಂದ್ಯದ ಬಳಿಕ ಮಾತನಾಡಿದ ನಾಯಕ ಪಾಂಡ್ಯ, 'ಪ್ರವಾಸಿ ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಸಾಮಾನ್ಯ ವ್ಯವಸ್ಥೆಗಳನ್ನು ಒದಗಿಸಲು ವಿಫಲವಾಗಿರುವ ವೆಸ್ಟ್‌ ಇಂಡೀಸ್ ಕ್ರಿಕೆಟ್‌ ಮಂಡಳಿ ಸಮಸ್ಯೆಗಳನ್ನು ಈ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: 3ನೇ ಏಕದಿನ: ಪಾಕಿಸ್ತಾನದ ಇಮಾಮ್ ಉಲ್ ಹಕ್ ಅಪರೂಪದ ದಾಖಲೆ ಹಿಂದಿಕ್ಕಿದ ಶುಭ್ ಮನ್ ಗಿಲ್

"ನಾವು ಆಡಿದ ಅತ್ಯುತ್ತಮ ಕ್ರಿಕೆಟ್‌ ಕ್ರೀಡಾಂಗಣಗಳಲ್ಲಿ ಇದೂ ಒಂದು. ಮುಂದಿನ ಬಾರಿ ನಾವು ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಂಡಾಗ ಪರಿಸ್ಥಿತಿಗಳು ಮತ್ತಷ್ಟು ಸುಧಾರಿಸಿರುತ್ತವೆ ಎಂದು ಭಾವಿಸುತ್ತೇನೆ. ಪ್ರಯಾಣದಿಂದ ಹಿಡಿದು ಎಲ್ಲ ಸಂಗತಿಗಳನ್ನು ನಿಭಾಯಿಸುವ ಕಡೆಗೆ ಸಾಕಷ್ಟು ಸುಧಾರಣೆ ಆಗಬೇಕಿದೆ. ಕಳೆದ ಪ್ರವಾಸದಲ್ಲಿಯೂ ಹಲವು ಸಮಸ್ಯೆಗಳು ಎದುರಾಗಿದ್ದವು. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿಗೆ ಎಚ್ಚೆತ್ತುಕೊಳ್ಳಲು ಇದು ಸರಿಯಾದ ಸಮಯ. ಇಲ್ಲಿಗೆ ಪ್ರಯಾಣ ಬೆಳೆಸುವ ತಂಡಗಳನ್ನು ಉತ್ತಮವಾಗಿ ನಡೆಸಿಕೊಳ್ಳುವ ಅಗತ್ಯವಿದೆ. ನಾವಿಲ್ಲಿ ಐಶಾರಾಮಿ ಆತಿಥ್ಯ ಎದುರು ನೋಡುತ್ತಿಲ್ಲ. ಬದಲಿಗೆ ಸರಳ ಮತ್ತು ಸಾಮಾನ್ಯ ಸಂಗತಿಗಳ ವ್ಯವಸ್ಥೆಯಾಗುವ ಅಗತ್ಯವಿದೆ. ಉಳಿದಂತೆ ಇಲ್ಲಿ ಬಂದು ಆಡುವುದು ಸಂತಸ ಹೆಚ್ಚಿಸಿದೆ ಎಂದು ಪಾಂಡ್ಯ ಹೇಳಿದ್ದಾರೆ.

ಇದನ್ನೂ ಓದಿ: 3ನೇ ಏಕದಿನ ಪಂದ್ಯ: ಸುದೀರ್ಘ ಕಾಲದ ಬಳಿಕ ಟೀಂ ಇಂಡಿಯಾಗೆ ಕಮ್ ಬ್ಯಾಕ್: ದಾಖಲೆ ಬರೆದ ಉನಾದ್ಕತ್

ಮೂಲಗಳ ಪ್ರಕಾರ ಈ ಬಾರಿ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಭಾರತ ತಂಡ ಸಾಕಷ್ಟು ಸಮಸ್ಯೆ ಎದುರಿಸಿದೆ ಎಂದು ವರದಿಯಾಗಿದೆ. ವಿಮಾನ ವೇಳಾಪಟ್ಟಿಯಲ್ಲಿನ ಗೊಂದಲ, ತಡರಾತ್ರಿ ಪ್ರಯಾಣ ಎಲ್ಲದರಿಂದ ಆಟಗಾರರಿಗೆ ಸರಿಯಾದ ನಿದ್ರೆ ಇಲ್ಲದಂತ್ತಾಗಿ ಏಕದಿನ ಕ್ರಿಕೆಟ್‌ ಸರಣಿಗೆ ತಯಾರಿ ನಡೆಸಲು ಸಮಸ್ಯೆಯಾಗಿತ್ತು. ಈ ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಬಿಸಿಸಿಐಗೆ ಕೂಡ ದೂರು ನೀಡಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿಲ್ಲ.  
 


Stay up to date on all the latest ಕ್ರಿಕೆಟ್ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp