ಕ್ರಿಕೆಟ್ ಆಟಗಾರರ ಮರ್ಯಾದೆ ಹರಾಜು: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ನ್ಯೂಸ್ ಚಾನೆಲ್‌ನ ಕುಟುಕು ಕಾರ್ಯಾಚರಣೆಯ ನಂತರ ಭಾರತದ ವೇಗದ ಬೌಲರ್ ಚೇತನ್ ಶರ್ಮಾ ಅವರು ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಚೇತನ್ ಶರ್ಮಾ
ಚೇತನ್ ಶರ್ಮಾ
Updated on

ನವದೆಹಲಿ: ನ್ಯೂಸ್ ಚಾನೆಲ್‌ನ ಕುಟುಕು ಕಾರ್ಯಾಚರಣೆಯ ನಂತರ ಭಾರತದ ವೇಗದ ಬೌಲರ್ ಚೇತನ್ ಶರ್ಮಾ ಅವರು ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಅವರು ಸ್ಟಿಂಗ್ ಆಪರೇಷನ್ ನಲ್ಲಿ ನೀಡಿದ ಹೇಳಿಕೆಯಿಂದ ಉಂಟಾಗಿರುವ ವಿವಾದದ ನಡುವೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದಾರೆ, ಅವರು ಅದನ್ನು ಅಂಗೀಕರಿಸಿದ್ದಾರೆ. ಅವರಿಂದ ನಾವು ರಾಜಿನಾಮೆ ಕೇಳಿರಲಿಲ್ಲ, ಸ್ವತಃ ಅವರೇ ರಾಜಿನಾಮೆ ನೀಡಿದ್ದಾರ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಗಾಳ ಮತ್ತು ಸೌರಾಷ್ಟ್ರ ನಡುವಿನ ರಣಜಿ ಟ್ರೋಫಿ ಫೈನಲ್‌ಗಾಗಿ ಚೇತನ್ ಶರ್ಮಾ ಇತರ ಆಯ್ಕೆ ಸಮಿತಿ ಸದಸ್ಯರೊಂದಿಗೆ ಕೋಲ್ಕತ್ತಾದಲ್ಲಿದ್ದರು.  2022ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದ ನಂತರ, ಬಿಸಿಸಿಐ ಆಯ್ಕೆ ಸಮಿತಿಯನ್ನು ವಜಾಗೊಳಿಸಿತ್ತು. ಆಗಲೂ ಚೇತನ್ ಶರ್ಮಾ ಮುಖ್ಯ ಆಯ್ಕೆಗಾರರಾಗಿದ್ದರು. ಇದಾದ ಬಳಿಕ ಅವರಿಗೆ ಮತ್ತೆ ಈ ಜವಾಬ್ದಾರಿ ಸಿಕ್ಕಿತ್ತು. ಆದರೆ ಇದಾದ ಬಳಿಕ ವಿವಾದದಿಂದಾಗಿ ಕುರ್ಚಿ ಕಳೆದುಕೊಳ್ಳಬೇಕಾಯಿತು.

ಕುಟುಕು ಕಾರ್ಯಾಚರಣೆಯಲ್ಲಿ ಶರ್ಮಾ ಅವರು ವಿರಾಟ್ ಕೊಹ್ಲಿ, ಸೌರವ್ ಗಂಗುಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ  ತಂಡದ ಇತರ ಹಲವಾರು ಆಟಗಾರರ ಬಗ್ಗೆ ಕೆಲವು ವಿಚಿತ್ರವಾದ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com