ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದ ಕೆ.ಎಲ್.ರಾಹುಲ್: ವಿಶೇಷ ಉಡುಗೊರೆ ನೀಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಬ್ಯಾಟರ್ ಕೆಎಲ್ ರಾಹುಲ್
ಧರ್ಮಸ್ಥಳಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಬ್ಯಾಟರ್ ಕೆಎಲ್ ರಾಹುಲ್
Updated on

ದಕ್ಷಿಣ ಕನ್ನಡ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ

ವೀರೇಂದ್ರ ಹೆಗ್ಗಡೆ ಅವರು ಕೆಎಲ್ ರಾಹುಲ್​ಗೆ ಶಾಲು ಹೊದಿಸಿ, ಗೋವಿನ ಕಂಚಿನ ಪ್ರತಿಮೆ ಹಾಗೂ ಬೆಳ್ಳಿ ನಾಣ್ಯ ನೀಡಿ ಗೌರವಿಸಿದರು. ಇದೇ ವೇಳೆ ರಾಹುಲ್, ವೀರೇಂದ್ರ ಹೆಗ್ಗಡೆ ಕುಟುಂಬಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಐಪಿಎಲ್ 2023ರ ಸಂದರ್ಭದಲ್ಲಿ ಫೀಲ್ಡಿಂಗ್ ವೇಳೆ ಕೆಎಲ್ ರಾಹುಲ್ ಮೊಣಕಾಲಿಗೆ ಗಾಯವಾಗಿತ್ತು. ಇದರಿಂದಾಗಿ ಅರ್ಧದಲ್ಲೇ ಟೂರ್ನಿಯಿಂದ ಹೊರನಡೆದಿದ್ದರು. ಅಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೂ ಅಲಭ್ಯರಾಗಿದ್ದರು. ನಂತರ ಅವರು ಲಂಡನ್‌ಗೆ ಹೋಗಿ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಂಡಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. 

ಮಾರ್ಚ್‌ನಲ್ಲಿ, ರಾಹುಲ್ ಮತ್ತು ಅವರ ಪತ್ನಿ ಅಥಿಯಾ ಶೆಟ್ಟಿ ಉಜ್ಜೈನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com