social_icon

ಕೆಎಲ್ ರಾಹುಲ್ ತಾಳ್ಮೆಯ ಆಟ: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 5 ವಿಕೆಟ್ ಜಯ

ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಾಳ್ಮೆಯ ಆಟವಾಡಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

Published: 17th March 2023 09:17 PM  |   Last Updated: 17th March 2023 09:17 PM   |  A+A-


ಸಂಗ್ರಹ ಚಿತ್ರ

Online Desk

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಾಳ್ಮೆಯ ಆಟವಾಡಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದಾರೆ. 

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಿತು. ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡ ಭಾರತ ತಂಡವು ಏಕದಿನ ಸರಣಿಯನ್ನೂ ಗೆಲ್ಲಲು ಹೊರಟಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತಕ್ಕೆ 189 ರನ್‌ಗಳ ಗುರಿಯನ್ನು ನೀಡಿತ್ತು. ಭಾರತ ಈ ಗುರಿಯನ್ನು 39.5 ಓವರ್‌ಗಳಲ್ಲಿ 191 ರನ್ ಪೇರಿಸಿದೆ.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯ ತಂಡ 35.4 ಓವರ್‌ಗಳಲ್ಲಿ 188 ರನ್‌ಗಳಿಗೆ ಆಲೌಟಾಯಿತು. ಮಿಚೆಲ್ ಮಾರ್ಷ್ ಕಾಂಗರೂಗಳ ಪರ ಗರಿಷ್ಠ 81 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಭಾರತ 39.5 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ಕೆಎಲ್ ರಾಹುಲ್ ಲಯಕ್ಕೆ ಮರಳಿದ್ದು ಉತ್ತಮ ಬ್ಯಾಟಿಂಗ್ ಮಾಡಿ 91 ಎಸೆತಗಳಲ್ಲಿ 75 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು. ಇನ್ನು ರವೀಂದ್ರ ಜಡೇಜಾ ಕೂಡ 45 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರಿಬ್ಬರ ನಡುವೆ ಆರನೇ ವಿಕೆಟ್‌ಗೆ 108 ರನ್‌ಗಳ ಅಜೇಯ ಜೊತೆಯಾಟವಿತ್ತು.

ಇದನ್ನೂ ಓದಿ: ಭಾರತ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗಬೇಕೇ?: ಹರ್ಭಜನ್ ಸಿಂಗ್ ಹೇಳಿದ್ದೇನು?

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನು ಮುಂದಿನ ಏಕದಿನ ಪಂದ್ಯ ಭಾನುವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 16 ವರ್ಷಗಳ ನಂತರ ಆಸ್ಟ್ರೇಲಿಯಾವನ್ನು ಸೋಲಿಸಿದೆ.

ಈ ಮೈದಾನದಲ್ಲಿ ಇಬ್ಬರ ನಡುವೆ ಐದು ಏಕದಿನ ಪಂದ್ಯಗಳು ನಡೆದಿವೆ. ಈ ಪೈಕಿ ಭಾರತ ಮೂರರಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯ ಎರಡು ಪಂದ್ಯಗಳನ್ನು ಗೆದ್ದಿದೆ. 2007ರಲ್ಲಿ ಈ ಮೈದಾನದಲ್ಲಿ ಭಾರತ ತಂಡ ಕೊನೆಯ ಬಾರಿಗೆ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಇದಾದ ಬಳಿಕ 2020ರಲ್ಲಿ ಆಸ್ಟ್ರೇಲಿಯಾ ಇದೇ ಮೈದಾನದಲ್ಲಿ ಭಾರತವನ್ನು ಸೋಲಿಸಿತ್ತು. ಇದೀಗ ಸುಮಾರು 16 ವರ್ಷಗಳ ನಂತರ ಭಾರತ ಮತ್ತೊಮ್ಮೆ ಆಸ್ಟ್ರೇಲಿಯಾವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ.


Stay up to date on all the latest ಕ್ರಿಕೆಟ್ news
Poll
Dk shivakumar

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳ ಗಡಿ ದಾಟುವುದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


Result
ಒಪ್ಪುತ್ತೇನೆ
ಒಪ್ಪುವುದಿಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp