social_icon

ಐಪಿಎಲ್​ಗೆ ಚೆನ್ನೈ ಸ್ಟಾರ್​ ಪ್ಲೇಯರ್​ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ!

ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 

Published: 28th May 2023 09:00 PM  |   Last Updated: 29th May 2023 01:50 PM   |  A+A-


Ambati Rayudu Announces IPL Retirement

ಅಂಬಾಟಿ ರಾಯುಡು

Posted By : Srinivasamurthy VN
Source : PTI

ಚೆನ್ನೈ: ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 

ಇಂದು ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯವೇ ತಮ್ಮ ಅಂತಿಮ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 

ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಫೈನಲ್ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.  ಐಪಿಎಲ್ 2023 ಫೈನಲ್ ಪಂದ್ಯವು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ ಸ್ಟಾರ್​ಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಐಪಿಎಲ್ ಫೈನಲ್ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆಯಲು ಧೋನಿ ಸಜ್ಜು: ಈ ಸಾಧನೆ ಮಾಡಿದ ಮೊದಲ ಆಟಗಾರ!

ಆದರೆ ಇದಕ್ಕೂ ಮೊದಲೇ ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ ಮಾಡಿದ್ದು, ತಾವು ಐಪಿಎಲ್‌ಗೆ ನಿವೃತ್ತಿ ಘೋಷಿಸಿ ಇದೇ ತನ್ನ ಅಂತಿಮ ಪಂದ್ಯ ಎಂದು ಹೇಳಿಕೊಂಡಿದ್ದಾರೆ. ಟ್ವಿಟರ್ ಮೂಲಕ ಈ ಕುರಿತು ಮಾಹಿತಿ ನೀಡಿರುವ ಅಂಬಾಟಿ ರಾಯುಡು, '204 ಪಂದ್ಯಗಳು, 14 ಋತುಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಇದು ಸಾಕಷ್ಟು ದೊಡ್ಡ ಪ್ರಯಾಣವಾಗಿದೆ. ಇಂದು ರಾತ್ರಿಯ ಫೈನಲ್ ಐಪಿಎಲ್‌ನಲ್ಲಿ ನನ್ನ ಕೊನೆಯ ಪಂದ್ಯ ಎಂದು ನಾನು ನಿರ್ಧರಿಸಿದ್ದೇನೆ. ಈ ಶ್ರೇಷ್ಠ ಪಂದ್ಯಾವಳಿಯನ್ನು ಆಡುವುದನ್ನು ನಾನು ನಿಜವಾಗಿಯೂ ಆನಂದಿಸುತ್ತೇನೆ. ನಿಮಗೆಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ನೋ ಯು ಟರ್ನ್ ಎಂದು ಹೇಳುವ ಮೂಲಕ ಈ ಹಿಂದಿನ ಊಹಾಪೋಹಗಳಿಗೂ ರಾಯುಡು ತೆರೆ ಎಳೆದಿದ್ದಾರೆ. ಈ ಹಿಂದೆಯೂ ಕೂಡ ಅಂಬಾಟಿ ರಾಯುಡು ನಿವೃತ್ತಿ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

ಇದನ್ನೂ ಓದಿ: ಸ್ವೀಟ್ ಮ್ಯಾಂಗೋಸ್: ಕೊಹ್ಲಿಯನ್ನು ಕೆಣಕ್ಕಿದ್ದ ನವೀನ್-ಉಲ್-ಹಕ್ ಗೆ ಮುಂಬೈ ಇಂಡಿಯನ್ಸ್ ಆಟಗಾರರ ತಿರುಗೇಟು!

ರಾಯುಡು 2010 ರಲ್ಲಿ ಮುಂಬೈ ಇಂಡಿಯನ್ಸ್‌ ಪರ ಆಡುವ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು ಮತ್ತು 2017 ರ ಋತುವಿನವರೆಗೆ ಮುಂಬೈ ತಂಡಕ್ಕಾಗಿ ಆಡಿದರು. ರಾಯುಡು ಅವರು 2018ರ ಋತುವಿಗಾಗಿ ಸಿಎಸ್​ಕೆ ತಂಡ ಸೇರಿಕೊಂಡರು. ಟೀಂ ಇಂಡಿಯಾದ ಮಾಜಿ ಆಟಗಾರ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯರ್​ ಅಂಬಟಿ ರಾಯುಡು ಶೀಘ್ರದಲ್ಲೇ ಆಂಧ್ರಪ್ರದೇಶ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಅವರು ಶೀಘ್ರದಲ್ಲೇ ಎಪಿ ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಕ್ರಿಕೆಟ್ ನಿಂದ ರಾಯುಡು ವಿಮುಖರಾಗಿದ್ದಾರೆ ಎನ್ನುವ ವದಂತಿಗಳು ಕೂಡ ಕೇಳಿಬರುತ್ತಿವೆ.


Stay up to date on all the latest ಕ್ರಿಕೆಟ್ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp