social_icon

2ನೇ ಏಕದಿನ ಪಂದ್ಯ: ಗಿಲ್, ಅಯ್ಯರ್ ಅದ್ಭುತ ಶತಕ; ಆಸ್ಟ್ರೇಲಿಯಾಗೆ 400 ರನ್ ಗುರಿ ನೀಡಿದ ಭಾರತ

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಶತಕ ಬಾರಿಸಿದ್ದು ಭಾರತ 5 ವಿಕೆಟ್‌ಗೆ 399 ರನ್ ಗಳಿಸಿದೆ. 

Published: 24th September 2023 06:58 PM  |   Last Updated: 24th September 2023 06:58 PM   |  A+A-


ಭಾರತ ತಂಡ

Posted By : Vishwanath S
Source : Online Desk

ಭೋಪಾಲ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಶತಕ ಬಾರಿಸಿದ್ದು ಭಾರತ 5 ವಿಕೆಟ್‌ಗೆ 399 ರನ್ ಗಳಿಸಿದೆ. 

ಭಾರತ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ 390ಕ್ಕೂ ಹೆಚ್ಚು ರನ್ ಗಳಿಸಿದೆ. ಇದಕ್ಕೂ ಮುನ್ನ 2013ರ ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ವಿಕೆಟ್‌ಗೆ 383 ರನ್‌ಗಳ ಗರಿಷ್ಠ ರನ್ ಪೇರಿಸಿತ್ತು. 3 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ ಸರಣಿಯನ್ನೂ ವಶಪಡಿಸಿಕೊಳ್ಳಲಿದೆ.

ಇದನ್ನೂ ಓದಿ: ವಿಶ್ವಕಪ್‌ಗೂ ಮುನ್ನ ಭರ್ಜರಿ ಬ್ಯಾಟಿಂಗ್ ಲಯದಲ್ಲಿ ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್: ಶತಕ ಸಿಡಿಸಿದ ಬ್ಯಾಟರ್‌ಗಳು!

ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮ್ಮಿನ್ಸ್ ಬದಲಿಗೆ ಸ್ಟೀವ್ ಸ್ಮಿತ್ ಕಾಂಗರೂ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಸ್ಮಿತ್ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದರು. ಇದಕ್ಕುತ್ತರವಾಗಿ ಟೀಂ ಇಂಡಿಯಾ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ 12 ಎಸೆತಗಳಲ್ಲಿ 8 ರನ್ ಗಳಿಸಿ ಜೋಸ್ ಹ್ಯಾಜಲ್‌ವುಡ್‌ಗೆ ಬಲಿಯಾದರು. ಆದರೆ ಇದಾದ ಬಳಿಕ ಶುಭ್‌ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅಮೋಘ ಪ್ರದರ್ಶನ ನೀಡಿದರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಎರಡನೇ ವಿಕೆಟ್‌ಗೆ 164 ಎಸೆತಗಳಲ್ಲಿ 200 ರನ್‌ಗಳ ಜೊತೆಯಾಟ ನೀಡಿದರು.

ಶ್ರೇಯಸ್ ಅಯ್ಯರ್ 90 ಎಸೆತಗಳಲ್ಲಿ 3 ಸಿಕ್ಸ್ ಮತ್ತು 11 ಬೌಂಡರಿಗಳೊಂದಿಗೆ 105 ಬಾರಿಸಿ ಔಟಾದರೆ, ಶುಭ್ಮನ್ ಗಿಲ್ 97 ಎಸೆತದಲ್ಲಿ 4 ಸಿಕ್ಸ್ ಮತ್ತು 6 ಬೌಂಡರಿಯೊಂದಿಗೆ 104 ರನ್ ಗಳಿಸಿ ಔಟಾದರು.

ನಂತರ ಬಂದ ನಾಯಕ ಕೆಎಲ್ ರಾಹುಲ್ ಸತತ ಎರಡನೇ ಪಂದ್ಯದಲ್ಲಿ ಅರ್ಧಶತಕ ಗಳಿಸಿದರು. ಸೂರ್ಯಕುಮಾರ್ ಯಾದವ್ ಕೂಡ ಅದ್ಭುತ ಇನ್ನಿಂಗ್ಸ್ ಆಡಿದರು. ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ 72 ರನ್ ಗಳಿಸಿದರು. 6 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರೆ ಕೆಎಲ್ ರಾಹುಲ್ 38 ಎಸೆತಗಳಲ್ಲಿ 52 ರನ್ ಗಳಿಸಿ ಔಟಾದರು.


Stay up to date on all the latest ಕ್ರಿಕೆಟ್ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp