ಮುಂಬೈಯಲ್ಲಿ ಕ್ರಿಕೆಟ್ ತಂಡದ 'ವಿಜಯ ಯಾತ್ರೆ': ಸಾರ್ವಜನಿಕ ಸಾರಿಗೆ ಬಳಸುವಂತೆ ಜನರಿಗೆ ಪೊಲೀಸರ ಮನವಿ

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.
ಅಭಿಮಾನಿಗಳು ಚಿತ್ರ ಬಿಡಿಸಿ ಭಾರತ ಕ್ರಿಕೆಟ್ ತಂಡಕ್ಕೆ ಗೌರವ ಸಲ್ಲಿಸುತ್ತಿರುವುದು
ಅಭಿಮಾನಿಗಳು ಚಿತ್ರ ಬಿಡಿಸಿ ಭಾರತ ಕ್ರಿಕೆಟ್ ತಂಡಕ್ಕೆ ಗೌರವ ಸಲ್ಲಿಸುತ್ತಿರುವುದು
Updated on

ಮುಂಬೈ: ಇಂದು ಗುರುವಾರ ಮುಂಬೈನಲ್ಲಿ ನಿಗದಿಯಾಗಿರುವ ಭಾರತೀಯ ಕ್ರಿಕೆಟ್ ತಂಡದ 'ವಿಜಯ ಯಾತ್ರೆ'ಗೆ ಮುಂಚಿತವಾಗಿ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ.

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.

ಅಭಿಮಾನಿಗಳು ಚಿತ್ರ ಬಿಡಿಸಿ ಭಾರತ ಕ್ರಿಕೆಟ್ ತಂಡಕ್ಕೆ ಗೌರವ ಸಲ್ಲಿಸುತ್ತಿರುವುದು
ದೆಹಲಿಗೆ ಬಂದಿಳಿದ T20 ವಿಶ್ವಕಪ್ ವಿಜೇತರು: ಹರ್ಷೋದ್ಘಾರಗಳ ನಡುವೆ ಸ್ವಾಗತ, ಇಂದು ಬೆಳಗ್ಗೆ ಪ್ರಧಾನಿ ಭೇಟಿ

ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ, ‘‘ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

ಸಂಚಾರ ದಟ್ಟಣೆಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಲು ಜನರನ್ನು ಒತ್ತಾಯಿಸಿದರು. ಸಂಜೆ 7 ಗಂಟೆಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸುವವರು 6 ಗಂಟೆಗೆ ಮುಂಚಿತವಾಗಿ ಕ್ರೀಡಾಂಗಣಕ್ಕೆ ತಲುಪಿ ಸೀಟಿನಲ್ಲಿ ಕುಳಿತುಕೊಳ್ಳಿ. ದಟ್ಟಣೆಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com