ಭಾರತ ವಿರುದ್ಧದ ಸರಣಿಗೂ ಮುನ್ನ ಶ್ರೀಲಂಕಾ T20 ನಾಯಕ ಸ್ಥಾನಕ್ಕೆ ಹಸರಂಗಾ ರಾಜೀನಾಮೆ

ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟಿ-20 ನಾಯಕ ಸ್ಥಾನದಿಂದ ಕೆಳಗಿಳಿಯಲು ವನಿಂದು ಹಸರಂಗ ನಿರ್ಧರಿಸಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಹೇಳಿಕೆಯಲ್ಲಿ ತಿಳಿಸಿದೆ.
ಹಸರಂಗಾ
ಹಸರಂಗಾ
Updated on

ಕೊಲಂಬೊ: ಮುಂಬರುವ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ-20 ಅಂತಾರಾಷ್ಟ್ರೀಯ ಸರಣಿಗೂ ಮುನ್ನ ಶ್ರೀಲಂಕಾ ಟಿ-20 ಕ್ರಿಕೆಟ್ ತಂಡದ ನಾಯಕನ ಸ್ಥಾನಕ್ಕೆ ವನಿಂದು ಹಸರಂಗಾ ರಾಜೀನಾಮೆ ನೀಡಿದ್ದಾರೆ. ಜುಲೈ 26, 27 ಮತ್ತು 29 ರಂದು ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರು ಟಿ-20 ಪಂದ್ಯಗಳ ನಂತರ ನಡೆಯಲಿರುವ ಏಕದಿನ ಸರಣಿಗಾಗಿ ಭಾರತ ತಂಡ ಶ್ರೀಲಂಕಾಕ್ಕೆ ತೆರಳುತ್ತಿದೆ.

ಹಸರಂಗಾ
ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಜಯಸೂರ್ಯ ನೂತನ ಕೋಚ್!

ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟಿ-20 ನಾಯಕ ಸ್ಥಾನದಿಂದ ಕೆಳಗಿಳಿಯಲು ವನಿಂದು ಹಸರಂಗ ನಿರ್ಧರಿಸಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಹೇಳಿಕೆಯಲ್ಲಿ ತಿಳಿಸಿದೆ. ಶ್ರೀಲಂಕಾ ಕ್ರಿಕೆಟ್‌ನ ಹಿತದೃಷ್ಟಿಯಿಂದ ನಾಯಕತ್ವ ತೊರೆಯುತ್ತಿದ್ದು, ಆಟಗಾರನಾಗಿ ತಂಡದಲ್ಲಿ ಉಳಿಯಲು ನಿರ್ಧರಿಸಿರುವುದು ಹಸರಂಗಾ ತಿಳಿಸಿದ್ದಾರೆ. ಟಿ-20 ವಿಶ್ವಕಪ್ ನಲ್ಲಿ ತಂಡವನ್ನು ಮುನ್ನಡೆಸಿದ್ದ ಹಸರಂಗಾ, ಸೂಪರ್ 8 ಹಂತಕ್ಕೆ ಕೊಂಡೊಯ್ಯುವಲ್ಲಿ ವಿಫಲರಾಗಿದ್ದರು.

ಆಟಗಾರರನಾಗಿ ಶ್ರೀಲಂಕಾ ತಂಡಕ್ಕೆ ಯಾವಾಗಲೂ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ. ನನ್ನ ತಂಡ ಮತ್ತು ನಾಯಕನ ಜೊತೆಗೆ ಸದಾ ನಿಲ್ಲುವುದಾಗಿ ಹಸರಂಗಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹಸರಂಗಾ ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಶ್ರೀಲಂಕಾ ಕ್ರಿಕೆಟ್ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com