ಶ್ರೀಲಂಕಾ ಪ್ರವಾಸ: T20 ತಂಡಕ್ಕೆ ಸೂರ್ಯಕುಮಾರ್ ನಾಯಕ; ಏಕದಿನ ತಂಡದಲ್ಲಿ ರೋಹಿತ್, ಕೊಹ್ಲಿ, ಕೆಎಲ್ ರಾಹುಲ್‌ಗೆ ಸ್ಥಾನ!

ಇಡೀ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಸೂರ್ಯಕುಮರ್ ಯಾದವ್-ರೋಹಿತ್ ಶರ್ಮಾ
ಸೂರ್ಯಕುಮರ್ ಯಾದವ್-ರೋಹಿತ್ ಶರ್ಮಾ
Updated on

ಟಿ20 ವಿಶ್ವಕಪ್ ವಿಜೇತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದ ಬೆನ್ನಲ್ಲೇ ಬಿಸಿಸಿಐ ಇದೀಗ ಟಿ20 ತಂಡದ ನಾಯಕನನ್ನಾಗಿ ಸೂರ್ಯಕುಮಾರ್ ನನ್ನು ಆಯ್ಕೆ ಮಾಡಿದೆ.

ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ಟಿ20 ನಾಯಕರನ್ನಾಗಿ ನೇಮಿಸಲಾಗಿದೆ. ಇಡೀ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಜಿಂಬಾಬ್ವೆ ಪ್ರವಾಸದಲ್ಲಿ ಭಾರತವನ್ನು ಮುನ್ನಡೆಸಿದ ನಂತರ ಆಯ್ಕೆದಾರರು ಶುಭಮನ್ ಗಿಲ್ ಅವರನ್ನು ಎರಡೂ ತಂಡಗಳ ಉಪನಾಯಕರನ್ನಾಗಿ ಹೆಸರಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು 2023ರ ODI ವಿಶ್ವಕಪ್ ಮತ್ತು ಇತ್ತೀಚೆಗೆ ಮುಕ್ತಾಯಗೊಂಡ T20 ವಿಶ್ವಕಪ್‌ನಲ್ಲಿ ಭಾರತದ ನಿಯೋಜಿತ ಉಪನಾಯಕರಾಗಿದ್ದರು. ಆದರೆ ಹಾರ್ದಿಕ್ ಅವರ ಫಿಟ್‌ನೆಸ್ ಸಮಸ್ಯೆಗಳು ಅವರನ್ನು ನಾಯಕತ್ವದಿಂದ ವಂಚಿತರಾಗುವಂತೆ ಮಾಡಿದೆ ಎಂದು ಹೇಳಲಾಗುತ್ತಿದೆ. ಆದರೆ ಟಿ20 ತಂಡದಲ್ಲಿ ಹಾರ್ದಿಕ್ ಆಡುತ್ತಿದ್ದು ಏಕದಿನ ತಂಡದಿಂದ ಕೈಬಿಡಲಾಗಿದೆ.

ಸೂರ್ಯಕುಮರ್ ಯಾದವ್-ರೋಹಿತ್ ಶರ್ಮಾ
ಅಮೇರಿಕಾದಲ್ಲಿ ವಿಶ್ವಕಪ್ 2024 ಟೂರ್ನಿ: ಐಸಿಸಿಗೆ 167 ಕೋಟಿ ರೂ. ನಷ್ಟ!

ತಂಡದಲ್ಲಿ ಹಿರಿಯರಾದ ರೋಹಿತ್ ಮತ್ತು ಕೊಹ್ಲಿ ಏಕದಿನ ಪಂದ್ಯಗಳಲ್ಲಿ ಆಡುತ್ತಾರಾ ಎಂಬ ಅನುಮಾನಗಳಿದ್ದವು. ಆದಾಗ್ಯೂ, ಗೌತಮ್ ಗಂಭೀರ್ ಅವರು ಭಾರತದ ಹೊಸ ಕೋಚ್ ಆಗಿ ಅವರ ಮೊದಲ ನಿಯೋಜನೆಯಲ್ಲಿ ಬ್ಯಾಟಿಂಗ್ ಲೈನ್‌ಅಪ್ ಅನ್ನು ಬಲಪಡಿಸುವ ಇಬ್ಬರೂ ಉಳಿಸಿಕೊಂಡಿದ್ದಾರೆ. ಟಿ20 ವಿಶ್ವಕಪ್‌ಗೆ ಪರಿಗಣಿಸದ ಕೆಎಲ್ ರಾಹುಲ್, ತಮ್ಮ ODI ಸ್ಥಾನವನ್ನು ಉಳಿಸಿಕೊಂಡಿದ್ದು ಶ್ರೇಯಸ್ ಅಯ್ಯರ್ ಕೂಡ ಇದ್ದಾರೆ. ಆದಾಗ್ಯೂ, ವಾಷಿಂಗ್ಟನ್ ಸುಂದರ್ ಮತ್ತು ರಿಯಾನ್ ಪರಾಗ್ ಅವರನ್ನು ಎರಡೂ ಸೀಮಿತ ಓವರ್ ಗಳಲ್ಲಿ ಆಡುತ್ತಿದ್ದು ಆಲ್ರೌಂಡರ್ ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಲಾಗಿದೆ.

ಟೀಂ ಇಂಡಿಯಾ ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷ್ ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.

ಟೀಂ ಇಂಡಿಯಾ ಏಕದಿನ ತಂಡ

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com