ಭಾರತದ ಮುಂದಿನ ODI ನಾಯಕ; ರೋಹಿತ್ ಶರ್ಮಾ ಉತ್ತರಾಧಿಕಾರಿ ಈ ಸ್ಟಾರ್ ಆಟಗಾರ!

ಹಿಟ್‌ಮ್ಯಾನ್ ಸದ್ಯ 50 ಓವರ್‌ಗಳ ಸ್ವರೂಪದಲ್ಲಿ ಮಾತ್ರ ಸಕ್ರಿಯರಾಗಿದ್ದು, 2024ರಲ್ಲಿ ವಿಶ್ವಕಪ್ ನಂತರ ಟಿ20ಐ ಮತ್ತು 2025ರ ಮೇನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
Rohit Sharma
ರೋಹಿತ್ ಶರ್ಮಾ
Updated on

ಭಾರತ ಕ್ರಿಕೆಟ್ ತಂಡದ ತಾರೆ ಶ್ರೇಯಸ್ ಅಯ್ಯರ್ ಅವರನ್ನು ಭವಿಷ್ಯದಲ್ಲಿ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯನ್ನಾಗಿ ನೇಮಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಮುಂಬೈ ಬ್ಯಾಟ್ಸ್‌ಮನ್ ಅಯ್ಯರ್‌ ಅವರನ್ನು ಮಂಗಳವಾರ ಘೋಷಿಸಲಾದ ಭಾರತದ ಏಷ್ಯಾ ಕಪ್ ತಂಡದಿಂದ ಕೈಬಿಡಲಾಗಿದೆ. ಆದಾಗ್ಯೂ, ರೋಹಿತ್ ನಿವೃತ್ತಿಯ ನಂತರ ಅಯ್ಯರ್ ಅವರನ್ನು ಹೊಸ ಏಕದಿನ ತಂಡದ ನಾಯಕನನ್ನಾಗಿ ಮಾಡಲು ಬಿಸಿಸಿಐ ಉದ್ದೇಶಿಸಿದೆ ಎಂದು ವರದಿಯೊಂದು ಹೇಳಿದೆ.

ದೈನಿಕ್ ಜಾಗರಣ್ ಪ್ರಕಾರ, ರೋಹಿತ್ ತಮ್ಮ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಂಡ ನಂತರ, ಬಿಸಿಸಿಐ ಶ್ರೇಯಸ್ ಅವರನ್ನು ಏಕದಿನ ತಂಡದ ನಾಯಕನನ್ನಾಗಿ ಮಾಡಲು ಯೋಜಿಸುತ್ತಿದೆ. ಹಿಟ್‌ಮ್ಯಾನ್ ಸದ್ಯ 50 ಓವರ್‌ಗಳ ಸ್ವರೂಪದಲ್ಲಿ ಮಾತ್ರ ಸಕ್ರಿಯರಾಗಿದ್ದು, 2024ರಲ್ಲಿ ವಿಶ್ವಕಪ್ ನಂತರ ಟಿ20ಐ ಮತ್ತು 2025ರ ಮೇನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಟದ ಮೂರು ಸ್ವರೂಪಗಳ ಭವಿಷ್ಯದ ಬಗ್ಗೆ ಸಂಬಂಧಪಟ್ಟವರು ಇತ್ತೀಚೆಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

'ಗಿಲ್ ಅವರನ್ನು ಚಾಂಪಿಯನ್ಸ್ ಟ್ರೋಫಿ 2025ರ ವೇಳೆ ಏಕದಿನ ತಂಡದ ಉಪನಾಯಕನನ್ನಾಗಿ ಮಾಡುವ ನಿರ್ಧಾರವನ್ನು ಅಂದಿನ ಪರಿಸ್ಥಿತಿಯ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ. ಈ ಸಮಯದಲ್ಲಿ, ಒಬ್ಬ ಆಟಗಾರ ಮೂರು ಸ್ವರೂಪಗಳಲ್ಲಿ ತಂಡವನ್ನು ಮುನ್ನಡೆಸುವುದು ಅಸಾಧ್ಯ. ಆದ್ದರಿಂದ, ಗಿಲ್ ಅವರಿಗೆ ಟೆಸ್ಟ್ ನಾಯಕತ್ವವನ್ನು ನೀಡಲಾಗಿದೆ ಮತ್ತು ಅವರನ್ನು ಟಿ20ಐ ಉಪನಾಯಕನನ್ನಾಗಿ ನೇಮಿಸಲಾಗಿದೆ ಮತ್ತು ಭವಿಷ್ಯದ ಟಿ20ಐ ನಾಯಕನಾಗಿ ನೋಡಲಾಗುತ್ತಿದೆ' ಎಂದು ಮೂಲಗಳು ತಿಳಿಸಿವೆ.

Rohit Sharma
'ನನ್ನನ್ನು ರೋಹಿತ್ ಶರ್ಮಾ, ಜಾರ್ಜ್ ಕ್ಲೂನಿ ಎಂದು ತಪ್ಪಾಗಿ ಭಾವಿಸಿದ್ದರು': ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ

ಅಕ್ಟೋಬರ್‌ನಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯು ರೋಹಿತ್ ಮತ್ತು ವಿರಾಟ್ ಕೊಹ್ಲಿ ಅವರ ಕೊನೆಯ ಸರಣಿಯಾಗಬಹುದು ಎಂದು ಈ ಹಿಂದೆ ವರದಿಗಳು ಹೇಳಿದ್ದವು. ಆಸ್ಟ್ರೇಲಿಯಾ ಏಕದಿನ ಪಂದ್ಯಗಳಲ್ಲಿ ಅಯ್ಯರ್ ತಂಡವನ್ನು ಮುನ್ನಡೆಸಲಿದ್ದಾರೆಯೇ ಎಂದು ಕೇಳಿದಾಗ, ಏಷ್ಯಾ ಕಪ್ ನಂತರ ಈ ವಿಷಯದ ಬಗ್ಗೆ ಚರ್ಚಿಸಲು ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಯಸ್ ಏಕದಿನ ತಂಡದ ನಾಯಕನಾಗುವುದು ಯಾವಾಗ ಎಂಬ ನಿರ್ಧಾರವು ರೋಹಿತ್ ಅವರ ಭವಿಷ್ಯದ ನಿರ್ಧಾರವನ್ನು ಅವಲಂಬಿಸಿರುತ್ತದೆ ಎಂದು ವರದಿಯಾಗಿದೆ. ಮುಂದಿನ ಏಕದಿನ ವಿಶ್ವಕಪ್ 2027 ರಲ್ಲಿ ನಡೆಯಲಿದ್ದು, ರೋಹಿತ್ ನಾಯಕನಾಗಿ ಮುಂದುವರಿಯುವ ಸಾಧ್ಯತೆಯಿಲ್ಲ.

ಶ್ರೇಯಸ್ ಅಯ್ಯರ್ ಅವರಿಗೆ ಇದುವರೆಗೆ ಏಕದಿನ ಅಥವಾ ಟಿ20ಐ ತಂಡಕ್ಕೆ ನಾಯಕತ್ವ ವಹಿಸಿಲ್ಲವಾದರೂ, ದೇಶೀಯ ಸರ್ಕ್ಯೂಟ್‌ನಲ್ಲಿ ಮುಂಬೈ ತಂಡವನ್ನು ಮುನ್ನಡೆಸುವಲ್ಲಿ ಅವರಿಗೆ ಸಾಕಷ್ಟು ಅನುಭವವಿದೆ. ಅವರು 2024/25ರ ವಿಜಯ್ ಹಜಾರೆ ಟ್ರೋಫಿಯಲ್ಲಿ ತಂಡವನ್ನು ಮುನ್ನಡೆಸಿದರು. ಇದರಲ್ಲಿ ಅವರು 5 ಪಂದ್ಯಗಳಿಂದ 325 ರನ್ ಗಳಿಸಿದರು. ಅಯ್ಯರ್ 2024ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದರು ಮತ್ತು ಪ್ರಶಸ್ತಿಗೆ ಕೊಂಡೊಯ್ದರು. ಅಯ್ಯರ್ 2024 ರಲ್ಲಿ ಕೆಕೆಆರ್ ತಂಡವನ್ನು ತಮ್ಮ ಮೂರನೇ ಐಪಿಎಲ್ ಪ್ರಶಸ್ತಿಗೆ ಮುನ್ನಡೆಸಿದರು. ನಂತರ ಅವರನ್ನು ಫ್ರಾಂಚೈಸಿ ಬಿಡುಗಡೆ ಮಾಡಿತು. ಐಪಿಎಲ್ 2025ರಲ್ಲಿ, ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ 14 ಪಂದ್ಯಗಳಲ್ಲಿ 9 ಗೆಲುವುಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com