3rd T20I: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ; ಬುಮ್ರಾ, ಅಕ್ಸರ್ ಪಟೇಲ್ ಅಲಭ್ಯ!

ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
India opt to bowl against South Africa
ಟಾಸ್ ಗೆದ್ದ ನಾಯಕ ಸೂರ್ಯ ಕುಮಾರ್ ಯಾದವ್
Updated on

ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

5 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸಮಬಲ ಸಾಧಿಸಿದ್ದು, ಸರಣಿ ಮೇಲೆ ಹಿಡಿತ ಸಾಧಿಸಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಪ್ರಮುಖವಾಗಿವೆ.

India opt to bowl against South Africa
U-19 Asia Cup 2025: 5 ವರ್ಷಗಳ ಬಳಿಕ ಪಾಕಿಸ್ತಾನವನ್ನು 90 ರನ್‌ಗಳಿಂದ ಮಣ್ಣು ಮುಕ್ಕಿಸಿದ ಭಾರತ

ಭಾರತ ತಂಡದಲ್ಲಿ 2 ಬದಲಾವಣೆ

ಇನ್ನು ಇಂದಿನ ಪಂದ್ಯಕ್ಕಾಗಿ ಭಾರತ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ಅಕ್ಸರ್ ಪಟೇಲ್ ಮತ್ತು ಜಸ್ ಪ್ರೀತ್ ಬುಮ್ರಾ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ವೇಗಿ ಹರ್ಷಿತ್ ರಾಣಾ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ತಂಡ ಸೇರಿಕೊಂಡಿದ್ದಾರೆ.

ತಂಡಗಳು ಇಂತಿವೆ

ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೊನೊವನ್ ಫೆರೆರಾ, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಆನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ಒಟ್ನೀಲ್ ಬಾರ್ಟ್‌ಮನ್

ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com