ಪಂಜಾಬ್ ವಿರುದ್ಧದ ರಣಜಿ ಪಂದ್ಯಕ್ಕೆ ಕೆಎಲ್ ರಾಹುಲ್ ಗೈರು

ಜನವರಿ 30 ರಂದು ಹರಿಯಾಣ ವಿರುದ್ಧದ ಕೊನೆಯ ಲೀಗ್ ಪಂದ್ಯಕ್ಕೆ ಕೆಎಲ್ ರಾಹುಲ್ ರಾಜ್ಯ ತಂಡದ ಭಾಗವಾಗಬಹುದು ಎಂದು ಪಿಟಿಐ ಜನವರಿ 18 ರಂದು ವರದಿ ಮಾಡಿತ್ತು.
KL Rahul
ಕೆಎಲ್ ರಾಹುಲ್
Updated on

ಬೆಂಗಳೂರು: ಮೊಣಕೈ ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅವರನ್ನು ಜನವರಿ 23 ರಂದು ಪ್ರಾರಂಭವಾಗುವ ಪಂಜಾಬ್ ವಿರುದ್ಧದ ಕೊನೆಯ ಎಲೈಟ್ ಗ್ರೂಪ್ ಸಿ ಪಂದ್ಯಕ್ಕೆ ಕರ್ನಾಟಕ ತಂಡದಿಂದ ಕೈಬಿಡಲಾಗಿದೆ.

ಜನವರಿ 30 ರಂದು ಹರಿಯಾಣ ವಿರುದ್ಧದ ಕೊನೆಯ ಲೀಗ್ ಪಂದ್ಯಕ್ಕೆ ರಾಹುಲ್ ರಾಜ್ಯ ತಂಡದ ಭಾಗವಾಗಬಹುದು ಎಂದು ಪಿಟಿಐ ಜನವರಿ 18 ರಂದು ವರದಿ ಮಾಡಿತ್ತು.

ಫೆಬ್ರವರಿ 6 ರಿಂದ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ಮತ್ತು ಫೆಬ್ರವರಿ 19 ರಿಂದ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ.

KL Rahul
Champions Trophy 2025: ಭಾರತ ತಂಡ ಪ್ರಕಟ; ರೋಹಿತ್ ನಾಯಕ; KL Rahul, Kohli, Shami ತಂಡಕ್ಕೆ ವಾಪಸ್

ಭಾರತದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯಗಳಲ್ಲಿ ಅರ್ಧಶತಕ ಮತ್ತು ಶತಕ ಬಾರಿಸಿದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಅವರನ್ನು ಒಳಗೊಂಡ 16 ಜನರ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ 18 ವಿಕೆಟ್‌ಗಳೊಂದಿಗೆ ಕರ್ನಾಟಕದ ಗೆಲುವಿಗೆ ಕಾರಣವಾಗಿದ್ದ ಶ್ರೇಯಸ್ ಗೋಪಾಲ್ ಅವರಿಗೆ ಉಪನಾಯಕನಾಗಿ ಬಡ್ತಿ ನೀಡಲಾಗಿದೆ.

ಕರ್ನಾಟಕ ತಂಡ:

ಮಯಾಂಕ್ ಅಗರ್ವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪನಾಯಕ), ದೇವದತ್ ಪಡಿಕ್ಕಲ್, ಕೆವಿ ಅನೀಶ್, ಆರ್ ಸ್ಮರನ್, ಕೆಎಲ್ ಶ್ರೀಜಿತ್(ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಪ್ರಸಿದ್ಧ್ ಕೃಷ್ಣ, ವಾಸುಕಿ ಕೌಶಿಕ್, ಯಶೋವರ್ಧನ್ ಪರಂತಪ್, ಅಭಿಲಾಷ್ ಶೆಟ್ಟಿ, ನಿಕಿನ್ ಜೊಸ್, ವಿದ್ಯಾಧರ್ ಪಾಟೀಲ್, ಸುಜಯ್ ಸಾಥೇರಿ(wk), ಮೊಹ್ಸಿನ್ ಖಾನ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com