England vs India, 5th Test: ಕನ್ನಡಿಗ ಕರುಣ್ ನಾಯರ್‌ಗೆ ಮತ್ತೆ ಸ್ಥಾನ; ಭಾರತ ತಂಡದಲ್ಲಿ ನಾಲ್ಕು ಬದಲಾವಣೆ!

ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಬದಲಿಗೆ ನಾಯರ್ ಸೇರ್ಪಡೆಯಾಗಲಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ 4ನೇ ಟೆಸ್ಟ್‌ನಲ್ಲಿ ಕರುಣ್ ನಾಯರ್ ಸಾಯಿ ಸುದರ್ಶನ್ ಅವರನ್ನು ಆಯ್ಕೆ ಮಾಡಲಾಗಿತ್ತು.
Karun Nair
ಕರುಣ್ ನಾಯರ್
Updated on

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ 1-2 ಅಂತರದ ಹಿನ್ನಡೆ ಅನುಭವಿಸಿರುವ ಭಾರತ, 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ತಂಡದಲ್ಲಿ ಕೆಲವು ದಿಟ್ಟ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ. 'ಕೆಲಸದ ಹೊರೆ ನಿರ್ವಹಣೆ'ಯಿಂದಾಗಿ ಜಸ್ಪ್ರೀತ್ ಬುಮ್ರಾ ಹೊರಗುಳಿಯುವ ಸಾಧ್ಯತೆಯಿರುವುದರಿಂದ, ಅರ್ಶದೀಪ್ ಸಿಂಗ್ ಅಥವಾ ಪ್ರಸಿದ್ಧ್ ಕೃಷ್ಣ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಆದಾಗ್ಯೂ, ಓವಲ್‌ನಲ್ಲಿ ನಡೆಯಲಿರುವ ಪಂದ್ಯವನ್ನು ಗೆಲ್ಲಲೇಬೇಕಿರುವ ಅನಿವಾರ್ಯತೆಗೆ ಸಿಲುಕಿರುವ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಶುಭಮನ್ ಗಿಲ್ ತಂಡದಲ್ಲಿ ಇನ್ನೂ ಮೂರು ಬದಲಾವಣೆ ಮಾಡುವ ಸಾಧ್ಯತೆಯಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಪ್ರಕಾರ, ಮ್ಯಾಂಚೆಸ್ಟರ್ ಟೆಸ್ಟ್‌ನಿಂದ ಹೊರಗುಳಿದ ನಂತರ ಸರಣಿಯ ಕೊನೆಯ ಪಂದ್ಯಕ್ಕೆ ಅನುಭವಿ ಕರುಣ್ ನಾಯರ್ ತಂಡಕ್ಕೆ ಮರಳುವ ನಿರೀಕ್ಷೆಯಿದೆ. ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಬದಲಿಗೆ ನಾಯರ್ ಸೇರ್ಪಡೆಯಾಗಲಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ 4ನೇ ಟೆಸ್ಟ್‌ನಲ್ಲಿ ಕರುಣ್ ನಾಯರ್ ಸಾಯಿ ಸುದರ್ಶನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಮಹತ್ವದ ಪಂದ್ಯವಾಗಿರುವುದರಿಂದ ತಂಡವು ಮತ್ತೊಮ್ಮೆ ಅನುಭವಿ ಬ್ಯಾಟ್ಸ್‌ಮನ್‌ ಅನ್ನು ನಂಬುವ ಸಾಧ್ಯತೆ ಇದೆ.

ಜಸ್ಪ್ರೀತ್ ಬುಮ್ರಾ ಮತ್ತು ಅನ್ಶುಲ್ ಕಾಂಬೋಜ್ ಇಬ್ಬರೂ ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದ್ದು, ಆಕಾಶ್ ದೀಪ್ ಪ್ಲೇಯಿಂಗ್ XIಗೆ ಮರಳಲಿದ್ದಾರೆ. ಕಾಂಬೋಜ್ ಬದಲಿಗೆ, ಭಾರತ ತಂಡವು ಅರ್ಶದೀಪ್ ಸಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ನಡುವೆ ಒಬ್ಬ ವೇಗಿಯನ್ನು ಆಯ್ಕೆ ಮಾಡಬೇಕಾಗಿದೆ.

Karun Nair
England vs India 5th test: ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆ; ನಿರ್ಣಾಯಕ ಪಂದ್ಯದಿಂದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಔಟ್!

ವರದಿ ಪ್ರಕಾರ, ಅರ್ಶದೀಪ್ ಮತ್ತು ಕುಲದೀಪ್ ಯಾದವ್ ಇಬ್ಬರೂ ಮತ್ತೆ ಸ್ಥಾನ ಕಳೆದುಕೊಳ್ಳುವ ನಿರೀಕ್ಷೆಯಿದೆ. ಏಕೆಂದರೆ ಆಡಳಿತ ಮಂಡಳಿಯು ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಅವರ ಸ್ಪಿನ್-ಬೌಲಿಂಗ್ ಸಂಯೋಜನೆಯನ್ನು ಮುಂದುವರೆಸಿದೆ. ಗಂಭೀರ್ ಮತ್ತು ಗಿಲ್ ಇಬ್ಬರೂ ಬ್ಯಾಟಿಂಗ್ ಅನ್ನು ಬಲಪಡಿಸುವ ಮೂಲಕ ಸ್ಪಿನ್ನರ್ ಕುಲದೀಪ್ ಅವರನ್ನು ಕೈಬಿಡಲು ಯೋಜಿಸಿದ್ದಾರೆ ಎನ್ನಲಾಗಿದೆ.

ಆದ್ದರಿಂದ, 5ನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಒಟ್ಟು 4 ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಿದೆ.

5ನೇ ಟೆಸ್ಟ್ ಪಂದ್ಯದ ಭಾರತದ ಸಂಭಾವ್ಯ ಪ್ಲೇಯಿಂಗ್ XI

ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್, ಕರುಣ್ ನಾಯರ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com