England Tests: ಟೀಂ ಇಂಡಿಯಾ ಆಯ್ಕೆ ಬಗ್ಗೆ BCCI ವಿರುದ್ಧ ದಾದಾ ಕೆಂಗಣ್ಣು; ಕಾರಣ Shreyas Iyer!

ಶ್ರೇಯಸ್ ಕಳೆದ ವರ್ಷದಿಂದ ಅದ್ಭುತ ಫಾರ್ಮ್‌ನಲ್ಲಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಪಂಜಾಬ್ ಕಿಂಗ್ಸ್ ಪರ ಅತಿ ಹೆಚ್ಚು ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ.
England Tests: ಟೀಂ ಇಂಡಿಯಾ ಆಯ್ಕೆ ಬಗ್ಗೆ BCCI ವಿರುದ್ಧ ದಾದಾ ಕೆಂಗಣ್ಣು; ಕಾರಣ Shreyas Iyer!
Updated on

ಮುಂಬೈ: ಇಂಗ್ಲೆಂಡ್ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ಹೊರಗಿಡುವ ಬಗ್ಗೆ ಮಾಜಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಸೌರವ್ ಗಂಗೂಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶ್ರೇಯಸ್ ಕಳೆದ ವರ್ಷದಿಂದ ಅದ್ಭುತ ಫಾರ್ಮ್‌ನಲ್ಲಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಪಂಜಾಬ್ ಕಿಂಗ್ಸ್ ಪರ ಅತಿ ಹೆಚ್ಚು ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ, ಶ್ರೇಯಸ್ ಅವರನ್ನು ಮಧ್ಯಮ ಕ್ರಮಾಂಕದ ಅಗ್ರ ಸ್ಪರ್ಧಿಯಾಗಿ ಸೂಚಿಸಲಾಗಿತ್ತು ಆದರೆ ಅವರಿಗೆ ಅಂತಿಮ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಶ್ರೇಯಸ್ ಅವರನ್ನು ಅವರ ಪ್ರಸ್ತುತ ಫಾರ್ಮ್ ಆಧರಿಸಿ ಆಯ್ಕೆ ಮಾಡಬೇಕಿತ್ತು ಮತ್ತು ಅವರು "ಹೊರಗುಳಿಯುವ ಆಟಗಾರ" ಅಲ್ಲ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

England Tests: ಟೀಂ ಇಂಡಿಯಾ ಆಯ್ಕೆ ಬಗ್ಗೆ BCCI ವಿರುದ್ಧ ದಾದಾ ಕೆಂಗಣ್ಣು; ಕಾರಣ Shreyas Iyer!
Team India ಹೊಸ ಕೋಚ್: 'ಬುದ್ಧಿವಂತಿಕೆಯಿಂದ ಆಯ್ಕೆ ಮಾಡಿ'- Sourav Ganguly ಸಲಹೆ!

“ಅವರು ಕಳೆದ ಒಂದು ವರ್ಷದಿಂದ ತಮ್ಮ ಅತ್ಯುತ್ತಮ ಆಟವಾಡುತ್ತಿದ್ದಾರೆ ಮತ್ತು ಈ ತಂಡದಲ್ಲಿ ಶ್ರೇಯಸ್ ಇರಬೇಕಿತ್ತು. ಕಳೆದ ಒಂದು ವರ್ಷ ಅವರಿಗೆ ಅದ್ಭುತವಾಗಿದೆ. ಅವರು ಹೊರಗುಳಿದ ಆಟಗಾರನಲ್ಲ. ಅವರು ಈಗ ಒತ್ತಡದಲ್ಲಿ ಸ್ಕೋರ್ ಮಾಡುತ್ತಿದ್ದಾರೆ, ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿದ್ದಾರೆ, ಶಾರ್ಟ್ ಬಾಲ್ ನ್ನು ಚೆನ್ನಾಗಿ ಆಡುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ವಿಭಿನ್ನವಾಗಿದ್ದರೂ, ಅವರು ಏನು ಮಾಡಬಹುದು ಎಂದು ನೋಡಲು ಈ ಸರಣಿಯಲ್ಲಿ ಅವರನ್ನು ತಂಡದಲ್ಲಿ ನೋಡಲು ಬಯಸುತ್ತೇನೆ" ಎಂದು ಗಂಗೂಲಿ ರೆವ್‌ಸ್ಪೋರ್ಟ್ಜ್‌ಗೆ ತಿಳಿಸಿದ್ದಾರೆ.

ಜೂನ್ 20 ರಿಂದ ಹೆಡಿಂಗ್ಲೆಯಲ್ಲಿ ಮೊದಲ ಪಂದ್ಯದಿಂದ ಪ್ರಾರಂಭವಾಗುವ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತವು ತನ್ನ ಹೊಸ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯನ್ನು ಪ್ರಾರಂಭಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com