IPL 2025: ಬೆಂಗಳೂರಿನ ಎಂ ಚಿನ್ನಸ್ವಾಮಿಯಲ್ಲಿ RCB vs CSK ಕಾದಾಟ; ಪಿಚ್ ರಿಪೋರ್ಟ್, ಹವಾಮಾನ ವರದಿ

ಚೆನ್ನೈ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿದರೆ 16 ಅಂಕಗಳನ್ನು ಪಡೆಯಲಿದ್ದು, ಪ್ಲೇಆಫ್‌‌ನಲ್ಲಿ ಸ್ಥಾನ ಬಹುತೇಕ ಖಚಿತವಾಗಲಿದೆ. ಆದಾಗ್ಯೂ, ಆರ್‌ಸಿಬಿ ಲೀಗ್ ಹಂತದಲ್ಲಿ ಇನ್ನೂ ಮೂರು ಪಂದ್ಯಗಳನ್ನು ಆಡಬೇಕಾಗಿದೆ.
ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ
ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ
Updated on

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇದೀಗ ಪ್ಲೇಆಫ್ ತಲುಪುವ ಸನಿಹದಲ್ಲಿದೆ. ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದ್ದ ಆರ್‌ಸಿಬಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂದಿನ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವನ್ನು ಎದುರಿಸಲಿದೆ.

ಉಭಯ ತಂಡಗಳ ಗುರಿಗಳನ್ನು ಮೀರಿ, ಶನಿವಾರ ಇಲ್ಲಿ ನಡೆಯುವ ಐಪಿಎಲ್ ಪಂದ್ಯವು ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ನಡುವಿನ ಹೋರಾಟವನ್ನು ನೋಡಲು ಅಭಿಮಾನಿಗಳಿಗೆ ಅವಕಾಶ ನೀಡುತ್ತದೆ. ಚೆನ್ನೈ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿದರೆ 16 ಅಂಕಗಳನ್ನು ಪಡೆಯಲಿದ್ದು, ಪ್ಲೇಆಫ್‌‌ನಲ್ಲಿ ಸ್ಥಾನ ಬಹುತೇಕ ಖಚಿತವಾಗಲಿದೆ. ಆದಾಗ್ಯೂ, ಆರ್‌ಸಿಬಿ ಲೀಗ್ ಹಂತದಲ್ಲಿ ಇನ್ನೂ ಮೂರು ಪಂದ್ಯಗಳನ್ನು ಆಡಬೇಕಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 52 ನೇ ಪಂದ್ಯವು ದಕ್ಷಿಣ ಭಾರತದ ಎರಡು ದೊಡ್ಡ ಫ್ರಾಂಚೈಸಿಗಳ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಡುವಿನ ಈ ಪಂದ್ಯವನ್ನು ಸದರ್ನ್ ಡರ್ಬಿ ಎಂದೂ ಕರೆಯಲಾಗುತ್ತದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಸೆಣಸಲಿವೆ.

ಚಿನ್ನಸ್ವಾಮಿ ಸ್ಟೇಡಿಯಂ ಪಿಚ್ ರಿಪೋರ್ಟ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವೆಂದು ಪರಿಗಣಿಸಲಾಗಿದೆ. ವಿಶೇಷವಾಗಿ ಟಿ20 ಮತ್ತು ಐಪಿಎಲ್ ಪಂದ್ಯಗಳಲ್ಲಿ, ಹೈಸ್ಕೋರಿಂಗ್ ಪಿಚ್ ಆಗಿದೆ. ಸಣ್ಣ ಬೌಂಡರಿ ಮತ್ತು ವೇಗದ ಔಟ್‌ಫೀಲ್ಡ್ ರನ್‌ಗಳಿಸುವುದನ್ನು ಸುಲಭವಾಗಿಸುತ್ತದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಇದು ಬ್ಯಾಟ್ಸ್‌ಮನ್‌ಗಳಿಗೆ ದೊಡ್ಡ ಹೊಡೆತಗಳನ್ನು ಬಾರಿಸಲು ಅನುವು ಮಾಡಿಕೊಡುತ್ತದೆ. ಆರಂಭದಲ್ಲಿ, ಪಿಚ್‌ನಲ್ಲಿ ಸ್ವಲ್ಪ ತೇವಾಂಶವಿರಬಹುದು. ಅದು ವೇಗದ ಬೌಲರ್‌ಗಳಿಗೆ ಸ್ವಿಂಗ್ ಮತ್ತು ಸೀಮ್ ಅನ್ನು ನೀಡುತ್ತದೆ. ಆದರೆ, ಪಂದ್ಯ ಮುಂದುವರಿದಂತೆ ಬ್ಯಾಟಿಂಗ್‌ಗೆ ಇನ್ನಷ್ಟು ಅನುಕೂಲವಾಗುತ್ತದೆ. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಸ್ವಲ್ಪ ತಿರುವು ಪಡೆಯಬಹುದು. ಆದರೆ, ಬ್ಯಾಟ್ಸ್‌ಮನ್‌ಗಳು ಸಾಮಾನ್ಯವಾಗಿ ಅವರ ಮೇಲೆ ಪ್ರಾಬಲ್ಯ ಸಾಧಿಸುತ್ತಾರೆ.

ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ
IPL 2025: 'ಬುಮ್ರಾ ಅವರಂತಹ ಆಟಗಾರರು...'; ಪರ್ಪಲ್ ಕ್ಯಾಪ್ ಬಗ್ಗೆ RCB ಮಾಜಿ ಆಟಗಾರ ಅಸಮಾಧಾನ

ಎರಡನೇ ಇನಿಂಗ್ಸ್‌ನಲ್ಲಿ ಇಬ್ಬನಿ ಬೌಲರ್‌ಗಳಿಗೆ ತೊಂದರೆ ಉಂಟುಮಾಡುವ ಕಾರಣ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದು ಅನುಕೂಲಕರವಾಗಿರುತ್ತದೆ. ಕೆಎಲ್ ರಾಹುಲ್ ಇತ್ತೀಚೆಗೆ ಆಟವಾಡಿದಂತೆ ಬ್ಯಾಟ್ಸ್‌ಮನ್‌ಗಳು ಆರಂಭದಲ್ಲಿ ಎಚ್ಚರಿಕೆಯಿಂದ ಆಡಿ ನಂತರ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಬೇಕಿರುತ್ತದೆ. ವೇಗದ ಬೌಲರ್‌ಗಳು ಪವರ್‌ಪ್ಲೇನಲ್ಲಿ ಆಕ್ರಮಣ ಮಾಡಬೇಕು. ಆದರೆ, ಸ್ಪಿನ್ನರ್‌ಗಳು ಮಧ್ಯಮ ಓವರ್‌ಗಳಲ್ಲಿ ನಿಖರವಾದ ಲೈನ್ ಮತ್ತು ಲೆಂತ್‌ನೊಂದಿಗೆ ಆಟವನ್ನು ಬದಲಾಯಿಸಬಹುದು. ಪಂದ್ಯವನ್ನು ಗೆಲ್ಲಲು ಇಲ್ಲಿ ಮೊದಲ ಇನಿಂಗ್ಸ್ ಸರಾಸರಿ 193 ರನ್ ಆಗಿದೆ. ಈ ಮೈದಾನದಲ್ಲಿ 2024ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನಿಂದ ಐಪಿಎಲ್‌ನ ಅತ್ಯಧಿಕ ಸ್ಕೋರ್ (287/3) ದಾಖಲಾಗಿದೆ.

ಮಳೆ ಬರುವ ಸಾಧ್ಯತೆ ಇದೆಯಾ?

ಪಂದ್ಯದ ದಿನದಂದು ಬೆಂಗಳೂರಿನ ಹವಾಮಾನವು ಬಿಸಿ ಮತ್ತು ಶುಷ್ಕವಾಗಿರುತ್ತದೆ. ತಾಪಮಾನವು ಸುಮಾರು 32 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ನಿರೀಕ್ಷಿಸಲಾಗಿದೆ. ರಾತ್ರಿ ಕನಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಹುಮಿಡಿಟಿ ಸುಮಾರು ಶೇ 68 ರಷ್ಟು ಆಗಿರುತ್ತದೆ. ಇದು ಆಟಗಾರರು ಮತ್ತು ಪ್ರೇಕ್ಷಕರಿಗೆ ಸ್ವಲ್ಪ ಕಿರಿಕಿರಿ ಉಂಟುಮಾಡಬಹುದು. ಮಳೆಯಾಗುವ ಸಾಧ್ಯತೆಯಿಲ್ಲ.

ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ
ಕಳೆದ 2 ವರ್ಷಗಳಿಂದ ನೋವಿನಿಂದ ಬಳಲುತ್ತಿದ್ದೆ; RCB ನನಗೆ ಶಸ್ತ್ರಚಿಕಿತ್ಸೆ ಮಾಡಿಸಿದೆ: ಸುಯಾಶ್ ಶರ್ಮಾ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com