KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು KSCA ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.
Venkatesh Prasad
ವೆಂಕಟೇಶ್ ಪ್ರಸಾದ್
Updated on

ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (KSCA) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ​ಚುನಾವಣೆಗೂ ಮುನ್ನವೇ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಆದೇಶಿಸಿತ್ತು. ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ನಡೆದ ನಾಮಪತ್ರ ಪರಿಶೀಲನೆ ವೇಳೆ ಶಾಂತಕುಮಾರ್ ಸಲ್ಲಿಸಿದ್ದ ನಾಮಪತ್ರ ಅಸಿಂಧುಗೊಂಡಿದೆ.

Venkatesh Prasad
Watch | ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ವೆಂಕಿ ಸ್ಪರ್ಧೆ! ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್ ಆಡಿಸುವ ಗುರಿ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com