ರಣಜಿ ಟ್ರೋಫಿ: ಸಂಭಾವ್ಯರ ಪಟ್ಟಿಯಲ್ಲಿ ಕೆ.ಎಲ್ ರಾಹುಲ್, ಪ್ರಸಿದ್ಧ್, ಕರುಣ್ ನಾಯರ್

ಅಕ್ಟೋಬರ್ 15ರಿಂದ ಆರಂಭವಾಗುವ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡವು ಮೊದಲ ಪಂದ್ಯದಲ್ಲಿ ಸೌರಾಷ್ಟ್ರವನ್ನು ಎದುರಿಸಲಿದೆ.
KL Rahul
ಕೆ.ಎಲ್ ರಾಹುಲ್
Updated on

ಬೆಂಗಳೂರು: ಅಕ್ಟೋಬರ್ 15ರಿಂದ ಆರಂಭವಾಗುವ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡವು ಮೊದಲ ಪಂದ್ಯದಲ್ಲಿ ಸೌರಾಷ್ಟ್ರವನ್ನು ಎದುರಿಸಲಿದೆ. ಮೊದಲ ಹಂತ ಅ.15 ರಿಂದ ನ.19ರವರೆಗೆ ನಡೆಯಲಿದೆ.

ಕರ್ನಾಟಕ ಮಂಗಳವಾರ ರಣಜಿ ಟ್ರೋಫಿಗೆ ಟೀಂ ಇಂಡಿಯಾ ಆಟಗಾರರಾದ ಕೆ.ಎಲ್. ರಾಹುಲ್, ಪ್ರಸಿದ್ಧ್ ಕೃಷ್ಣ ಮತ್ತು ಕರುಣ್ ನಾಯರ್ ಅವರನ್ನು ಸಂಭಾವ್ಯರ ಪಟ್ಟಿಯಲ್ಲಿ ಹೆಸರಿಸಿದೆ.

ರಾಹುಲ್ ಮತ್ತು ಪ್ರಸಿದ್ಧ್ ಪ್ರಸ್ತುತ ಲಖನೌದಲ್ಲಿದ್ದು, ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಟೆಸ್ಟ್‌ನಲ್ಲಿ ಭಾರತ ಎ ಪರ ಆಡುತ್ತಿದ್ದಾರೆ.

ಕರ್ನಾಟಕವು ಎಲೈಟ್ ಗ್ರೂಪ್ ಬಿ ಆಗಿದ್ದು, ಅಕ್ಟೋಬರ್ 15 ರಂದು ರಾಜ್‌ಕೋಟ್‌ನಲ್ಲಿ ಸೌರಾಷ್ಟ್ರ ವಿರುದ್ಧದ ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದೆ.

KL Rahul
Ranji Trophy: ಕೊನೆಗೂ ವಿದರ್ಭ ಕನಸು ಛಿದ್ರ; ದಾಖಲೆಯ 42ನೇ ಬಾರಿಗೆ ರಣಜಿ ಟ್ರೋಫಿ ಗೆದ್ದ ಮುಂಬೈ!

ಮೊದಲ ಹಂತದಲ್ಲಿ ಒಟ್ಟು 16 ಪಂದ್ಯಗಳು ನಡೆಯಲಿವೆ. ಎಲೈಟ್ ಹಂತದಲ್ಲಿ ಕರ್ನಾಟಕವು ಸೌರಾಷ್ಟ್ರ, ಗೋವಾ, ಕೇರಳ, ಮಹಾರಾಷ್ಟ್ರ, ಚಂಡೀಗಢ, ಮಧ್ಯಪ್ರದೇಶ ಮತ್ತು ಪಂಜಾಬ್ ತಂಡಗಳನ್ನು ಎದುರಿಸಲಿದೆ.

ಕರ್ನಾಟಕದ ಮಾಜಿ ಆಟಗಾರ ಯೆರೆ ಗೌಡ್ ಅವರು ಕೋಚ್ ಆಗಿ ಮುಂದುವರಿಯಲಿದ್ದು, ಭಾರತದ ಅಂಡರ್-19 ತಂಡದ ಆಸ್ಟ್ರೇಲಿಯಾ ಪ್ರವಾಸದ ನಂತರ ತಂಡವನ್ನು ಸೇರಲಿದ್ದಾರೆ.

37 ಸದಸ್ಯರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಇತರ ಪ್ರಮುಖ ಹೆಸರುಗಳು

ಭಾರತದ ಬ್ಯಾಟ್ಸ್‌ಮನ್‌ಗಳಾದ ದೇವದತ್ ಪಡಿಕ್ಕಲ್, ಮಾಯಾಂಕ್ ಅಗರ್ವಾಲ್, ಶ್ರೇಯಸ್ ಗೋಪಾಲ್, ಭಾರತದ ವೇಗಿ ವೈಶಾಕ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಆರ್ ಸ್ಮರನ್ ಮತ್ತು ಮುಂಬೈ ಇಂಡಿಯನ್ಸ್‌ನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ಶ್ರೀಜಿತ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com