

ಕೊಲಂಬೊ: ಭಾರತ ತಂಡವು ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತಕ್ಕೆ ಪ್ರವೇಶಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 61 ರನ್ ಗಳ ಅಂತರದಿಂದ ಸೋಲಿಸಿದ ಭಾರತ ನಿರಾಯಾಸವಾಗಿ ಸೂಪರ್ ಎಂಟರ ಸುತ್ತಿಗೆ ಪ್ರವೇಶ ಗಿಟ್ಟಿಸಿಕೊಂಡಿತು.
ಪಾಕಿಸ್ತಾನ ವಿರುದ್ಧದ ಗೆಲುವು ದೇಶಾದ್ಯಂತ ಸಂಭ್ರಮಾಚರಣೆಗೆ ಕಾರಣವಾಗಿದ್ದು,ಕ್ರಿಕೆಟ್ ಅಭಿಮಾನಿಗಳು ರಾತ್ರಿಯಿಡಿ ರಸ್ತೆಯಲ್ಲಿ ಕುಣಿದು ಸಂಭ್ರಮಿಸಿದ್ದಾರೆ.
ಪಂದ್ಯ ನಡೆದ ಶ್ರೀಲಂಕಾದ ಕೊಲಂಬೊ, ನವದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಜನರು , ಅದರಲ್ಲೂ ಯುವ ಜನತೆ ದೇಶದ ಪರ ಘೋಷಣೆ, ಜೈಕಾರ ಹಾಕುವ ಮೂಲಕ ಸಂಭ್ರಮಪಟ್ಟಿದ್ದಾರೆ.
ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಡಾ. ಹೆಚ್. ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮೂಲಕ ಭಾರತ ತಂಡಕ್ಕೆ ಶುಭಾಶಯ ಕೋರಿದ್ದಾರೆ.
Advertisement