

ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಭಾರತ - ಪಾಕಿಸ್ತಾನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಉಭಯ ತಂಡಗಳ ನಾಯಕರು ಹ್ಯಾಂಡ್ ಶೇಕ್ ಮಾಡುತ್ತಾರೆಯೋ ಇಲ್ಲವೋ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಈ ಮಧ್ಯೆ ಭಾರತ ಹ್ಯಾಂಡ್ ಶೇಕ್ ಮಾಡದಿರಲು ನಿರ್ಧರಿಸಿದೆ ಎಂದು ವರದಿ ಮಾಡಿದೆ. ಈ ಬೆನ್ನಲ್ಲೆ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ನೋ ಹ್ಯಾಂಡ್ ಶೇಕ್ ಅಭಿಯಾನದ ಬಗ್ಗೆ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಸಂಜಯ್ ಮಂಜ್ರೇಕರ್, ಭಾರತ ಆರಂಭಿಸಿರುವ ಈ ನೋ ಹ್ಯಾಂಡ್ ಶೇಕ್ ಎಂಬುದು ತುಂಬಾ ಮೂರ್ಖತನದಿಂದ ಕೂಡಿದ ಕೆಲಸ. ನಮ್ಮಂತಹ ರಾಷ್ಟ್ರಕ್ಕೆ ಇದು ಯೋಗ್ಯ ಅಲ್ಲ. ಆಟದ ಉತ್ಸಾಹದಲ್ಲಿ ಸರಿಯಾಗಿ ಆಟವಾಡಿ ಅಥವಾ ಆಟವಾಡಲೇಬೇಡಿ " ಎಂದು ಕಿಡಿಕಾರಿದ್ದಾರೆ.
ಸಂಜಯ್ ಮಂಜ್ರೇಕರ್ ಟ್ವೀಟ್ ವಿರುದ್ಧ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.ಈತ ಯಾವಾಗಿನಿಂದ ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಆರಂಭಿಸಿದ", "ಭಯೋತ್ಪಾದಕರ ಜತೆ ಕೈಕುಲುಕುವುದಕ್ಕೆ ನಮಗೇನು ಬಿದ್ದಿಕೆಟ್ಟಿದೆಯಾ " ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಪಾಕಿಸ್ತಾನ ತಂಡದ ಜತೆ ನಿಂತಿರುವ ಫೋಟೋಗಳು, ವ್ಯಂಗ್ಯ ಚಿತ್ರಗಳನ್ನು ರಚಿಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
Advertisement