T20 World Cup 2026: ಹರಿಣಿಗಳಿಂದ ಸೋತ ಬಳಿಕ ಡಗ್ ಔಟ್ ನಲ್ಲಿ ಗಂಭೀರ್-ಯಾದವ್ ನಡುವೆ ಮಾತಿನ ಚಕಮಕಿ! Video

ಹರಿಣಿಗಳಿಂದ ಭಾರತ ಸೋತ ಬಳಿಕ ಡಗ್ ಔಟ್ ನಲ್ಲಿ ಕುಳಿತಿದ್ದ ಟೀಂ ಇಂಡಿಯಾ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ಸೂರ್ಯ ಕುಮಾರ್ ಯಾದವ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.
Suryakumar Yadav and head coach Gautam Gambhir
ಸೂರ್ಯ ಕುಮಾರ್ ಯಾದವ್ ಮತ್ತು ಗೌತಮ್ ಗಂಭೀರ್
Updated on

ನವದೆಹಲಿ: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 76 ರನ್ ಗಳಿಂದ ಸೋತ ಭಾರತದ ಸೆಮಿಫೈನಲ್ ಹಾದಿ ಕಷ್ಟವಾಗಿದೆ.

ಹರಿಣಿಗಳಿಂದ ಭಾರತ ಸೋತ ಬಳಿಕ ಡಗ್ ಔಟ್ ನಲ್ಲಿ ಕುಳಿತಿದ್ದ ಟೀಂ ಇಂಡಿಯಾ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ಸೂರ್ಯ ಕುಮಾರ್ ಯಾದವ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ವಿಚಾರದಲ್ಲಿ ಈ ಮಾತಿನ ಚಕಮಕಿ ನಡೆದಿರುವ ಸಾಧ್ಯತೆಯಿದೆ.

Suryakumar Yadav and head coach Gautam Gambhir
T20 World Cup 2026: ಅಕ್ಷರ್ ಪಟೇಲ್ ಬದಲು ವಾಶಿಂಗ್ಟನ್ ಸುಂದರ್! ಗಂಭೀರ್, ಸೂರ್ಯ ಕುಮಾರ್ ವಿರುದ್ಧ ಟೀಕಾ ಪ್ರಹಾರ

ಟಿ-20 ಮಾದರಿಯಲ್ಲಿ ದಾಖಲೆಯ ಸತತ 12 ಗೆಲುವಿನ ನಂತರ ಭಾರತಕ್ಕೆ ಮೊದಲ ಸೋಲಾಗಿದೆ. 2022 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಕೊನೆಯದಾಗಿ ಭಾರತ ಸೋತಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com