

ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಮ್ಮು ಮತ್ತು ಕಾಶ್ಮೀರ ಮೊದಲ ಇನ್ನಿಂಗ್ಸ್ನಲ್ಲಿ 584 ರನ್ ಗಳಿಸಿತು. ಆದರೆ ಕರ್ನಾಟಕ 293 ರನ್ಗಳಿಗೆ ಆಲೌಟ್ ಆಯಿತು. ಮಯಾಂಕ್ ಅಗರ್ವಾಲ್ 160 ರನ್ ಗಳಿಸಿದರು. ಆದರೆ ಅವರಿಗೆ ಇನ್ನೊಂದು ತುದಿಯಿಂದ ಬೆಂಬಲ ಸಿಗಲಿಲ್ಲ. ಮೊದಲ ಇನ್ನಿಂಗ್ಸ್ ನಂತರ, ಜಮ್ಮು ಮತ್ತು ಕಾಶ್ಮೀರ 291 ರನ್ಗಳ ಮುನ್ನಡೆಯನ್ನು ಹೊಂದಿದ್ದು, ಕರ್ನಾಟಕದ ಮೇಲೆ ತನ್ನ ಹಿಡಿತವನ್ನು ಸಂಪೂರ್ಣವಾಗಿ ಬಿಗಿಗೊಳಿಸಿದೆ.
ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ. ಅಲ್ಲದೆ ಐತಿಹಾಸಿಕ ಚೊಚ್ಚಲ ಪ್ರಶಸ್ತಿ ಗೆಲುವಿಗೆ ಬಹಳ ಹತ್ತಿರದಲ್ಲಿದೆ. ಜಮ್ಮು ಮತ್ತು ಕಾಶ್ಮೀರ ತಂಡವು ತನ್ನ ಎರಡನೇ ಇನ್ನಿಂಗ್ಸ್ನಲ್ಲಿ 4 ವಿಕೆಟ್ಗಳ ನಷ್ಟಕ್ಕೆ 186 ರನ್ ಗಳಿಸಿದೆ. ಆರಂಭಿಕ ಕಮ್ರಾನ್ ಇಕ್ಬಾಲ್ ಔಟಾಗದೆ 94 ರನ್ ಗಳಿಸಿ ಶತಕದ ಸಮೀಪದಲ್ಲಿದ್ದಾರೆ. ಆದರೆ ಸಾಹಿಲ್ ಲೋತ್ರಾ 16 ರನ್ಗಳೊಂದಿಗೆ ಅವರಿಗೆ ಬೆಂಬಲ ನೀಡುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ತಂಡವು ವೇಗದ ಬೌಲರ್ ಆಕಿಬ್ ನಬಿ ಅವರ ಚುರುಕಾದ ಬೌಲಿಂಗ್ನಿಂದ ಕರ್ನಾಟಕದ ಅಗ್ರ ಕ್ರಮಾಂಕವನ್ನು ಕೆಡವಿತು. ಮೂರನೇ ದಿನದಂದು ಮಾಯಾಂಕ್ ಅಗರ್ವಾಲ್ ಅವರ ಅಜೇಯ ಶತಕದ ಹೊರತಾಗಿಯೂ ಆತಿಥೇಯರನ್ನು ಮೊದಲ ಇನ್ನಿಂಗ್ಸ್ನಲ್ಲಿ 293 ರನ್ ಗಳಿಗೆ ಕಟ್ಟಿ ಹಾಕಿತ್ತು. ಜಮ್ಮು ಮತ್ತು ಕಾಶ್ಮೀರ ಪರ ನಬಿ ಅದ್ಭುತ ಪ್ರದರ್ಶನ ನೀಡಿ 23 ಓವರ್ಗಳಲ್ಲಿ 54 ರನ್ಗಳಿಗೆ 5 ವಿಕೆಟ್ಗಳನ್ನು ಕಬಳಿಸಿದರು.
Advertisement