ತವರಿನಲ್ಲೇ ಭಾರತಕ್ಕೆ ಹೀನಾಯ ಸೋಲು: ಮುಖ್ಯ ಕೋಚ್ ಗೌತಮ್ ಗಂಭೀರ್ ವಜಾಗೊಳಿಸುವ ಬಗ್ಗೆ BCCI ಹೇಳಿದ್ದು..

ಈ ಹಿಂದೆ, ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು 2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲಲು ವಿಫಲವಾದರೆ ಬಿಸಿಸಿಐ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ವಜಾಗೊಳಿಸಬೇಕು ಎಂದು ಮನೋಜ್ ತಿವಾರಿ ಹೇಳಿದ್ದರು.
India head coach Gautam Gambhir
ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್
Updated on

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಭವಿಷ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ತವರಿನಲ್ಲೇ ಸೋಲು ಕಂಡ ನಂತರ ಗಂಭೀರ್ ಅಭಿಮಾನಿಗಳು ಮತ್ತು ತಜ್ಞರಿಂದ ಟೀಕೆಗಳನ್ನು ಎದುರಿಸಿದರು ಮತ್ತು ಅವರಲ್ಲಿ ಕೆಲವರು ಅವರನ್ನು ಕೋಚ್ ಸ್ಥಾನದಿಂದ ತೆಗೆದುಹಾಕಬೇಕೆಂದು ಸೂಚಿಸಿದರು. ಆದಾಗ್ಯೂ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅಂತಹ ಯಾವುದೇ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ಸ್ಪೋರ್ಟ್‌ಸ್ಟಾರ್‌ಗೆ ನೀಡಿದ ಸಂದರ್ಶನದಲ್ಲಿ, ಜನರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಅರ್ಹರು. ಆದರೆ, ಬಿಸಿಸಿಐ ಈ ವಿಷಯಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅರ್ಹ ಜನರನ್ನು ಹೊಂದಿದೆ ಎಂದು ಸೈಕಿಯಾ ಹೇಳಿದರು.

'ಭಾರತವು 140 ಕೋಟಿ ಜನರ ದೇಶ ಮತ್ತು ಎಲ್ಲರೂ ಕ್ರಿಕೆಟ್ ತಜ್ಞರು. ಎಲ್ಲರಿಗೂ ಒಂದು ಅಭಿಪ್ರಾಯವಿರುತ್ತದೆ. ಇದು ಪ್ರಜಾಪ್ರಭುತ್ವ ರಾಷ್ಟ್ರ ಮತ್ತು ನಾವು ಯಾರನ್ನೂ ವಂಚಿಸಲು ಸಾಧ್ಯವಿಲ್ಲ. ಮಾಧ್ಯಮಗಳು ಸೇರಿದಂತೆ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ನೀಡಲು ಸ್ವತಂತ್ರರು. ಈ ಕ್ಷೇತ್ರದಲ್ಲಿ ಬಹಳಷ್ಟು ಊಹಾಪೋಹದ ಸುದ್ದಿಗಳಿವೆ ಮತ್ತು ವಿವಿಧ ಮಾಜಿ ಕ್ರಿಕೆಟಿಗರು, ಕ್ರಿಕೆಟಿಗರು ಅಥವಾ ಇತರ ಜನರು ಸಹ ಅಭಿಪ್ರಾಯಗಳನ್ನು ನೀಡುತ್ತಿದ್ದಾರೆ. ಸಾಮಾಜಿಕ ಮಾಧ್ಯಮವು ಇವುಗಳಿಂದಲೇ ತುಂಬಿದೆ' ಎಂದರು.

'ಆದರೆ ವಿಷಯವೆಂದರೆ ಬಿಸಿಸಿಐನಲ್ಲಿ ಕ್ರಿಕೆಟ್ ಸಮಿತಿ ಇದ್ದು, ಅದರಲ್ಲಿ ನಮ್ಮ ಮಾಜಿ ಕ್ರಿಕೆಟಿಗರು ಇದ್ದಾರೆ. ಅವರು ಸಮರ್ಪಿತರು ಮತ್ತು ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತೊಂದೆಡೆ, ತಂಡದ ಆಯ್ಕೆಗಾಗಿ, ನಮಗೆ ಐದು ಆಯ್ಕೆದಾರರು ಇದ್ದಾರೆ. ಅವರು ಆ ಸ್ಥಾನಕ್ಕೆ ಬರಲು ಅರ್ಹತೆ ಹೊಂದಿರಬೇಕು. ಹೀಗಾಗಿ, ಆ ಎಲ್ಲ ನಿರ್ಧಾರಗಳನ್ನು ಅವರೇ ತೆಗೆದುಕೊಳ್ಳುತ್ತಾರೆ. ಪ್ರತಿಯೊಂದು ನಿರ್ಧಾರಕ್ಕೂ ವಿಭಿನ್ನ ಅಭಿಪ್ರಾಯ ವ್ಯಕ್ತವಾಗಬಹುದು. ಆದ್ದರಿಂದ, ನಾವು ಆ ಅಭಿಪ್ರಾಯಗಳನ್ನು ಪರಿಗಣಿಸಬೇಕು ಮತ್ತು ಪರಿಗಣಿಸುತ್ತೇವೆ. ಆದರೆ ಅಂತಿಮ ನಿರ್ಧಾರವನ್ನು ಯಾವಾಗಲೂ ಕ್ರಿಕೆಟ್ ಸಮಿತಿ ಮತ್ತು ಆಯ್ಕೆದಾರರು ತೆಗೆದುಕೊಳ್ಳುತ್ತಾರೆ' ಎಂದು ತಿಳಿಸಿದರು.

India head coach Gautam Gambhir
'9 ರಲ್ಲಿ 5 ಏಕದಿನ ಪಂದ್ಯಗಳಲ್ಲಿ ಸೋಲು': ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಅಜಿಂಕ್ಯ ರಹಾನೆ ಕಿಡಿ

ಈ ಹಿಂದೆ, ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು 2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲಲು ವಿಫಲವಾದರೆ ಬಿಸಿಸಿಐ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ವಜಾಗೊಳಿಸಬೇಕು ಎಂದು ಮನೋಜ್ ತಿವಾರಿ ಹೇಳಿದ್ದರು.

'ಗೌತಮ್ ಗಂಭೀರ್ 2026ರ ಟಿ20 ವಿಶ್ವಕಪ್ ಗೆಲ್ಲಲು ವಿಫಲವಾದರೆ, ಬಿಸಿಸಿಐ ದೊಡ್ಡ ಮತ್ತು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ಬಿಸಿಸಿಐ ಕಾರ್ಯದರ್ಶಿ ಗಂಭೀರ್ ಅವರ ಒಪ್ಪಂದದ ಅವಧಿ ಮುಗಿಯುವವರೆಗೂ ನಾವು ಅವರೊಂದಿಗೆ ಮುಂದುವರಿಯುತ್ತೇವೆ ಎಂದು ಹೇಳಿದ್ದಾರೆ. ಆದರೆ, 2026ರ ಟಿ20 ವಿಶ್ವಕಪ್ ಉತ್ತಮ ಫಲಿತಾಂಶ ನೀಡದಿದ್ದರೆ, ಬಿಸಿಸಿಐ ದೊಡ್ಡ ನಿರ್ಧಾರ ತೆಗೆದುಕೊಂಡು ಅವರನ್ನು ವಜಾಗೊಳಿಸುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಭಾರತದ ಮಾಜಿ ಕ್ರಿಕೆಟಿಗ ಇನ್‌ಸೈಡ್‌ಸ್ಪೋರ್ಟ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com