ಕೇವಲ ಎರಡ್ಮೂರು ಪಂದ್ಯಗಳಿಂದ ಯಾರನ್ನೂ ಅಳೆಯಬೇಡಿ: ಶ್ರೇಯಸ್ ಅಯ್ಯರ್ ಪರ ಎಬಿಡಿ ಬ್ಯಾಟಿಂಗ್!

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಭಾರತ ಸತತ ನಾಲ್ಕು ಸೋಲುಗಳನ್ನು ಅನುಭವಿಸಿದ್ದು, ಅಯ್ಯರ್ ನಾಯಕತ್ವದಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ.
shreyas iyer
ಶ್ರೇಯಸ್ ಅಯ್ಯರ್
Updated on

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ T20 ನಾಯಕನಾದ ಬಳಿಕ ಭಾರತ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಹೀಗಾಗಿ ಅಯ್ಯರ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು, ಶ್ರೇಯಸ್ ಅಯ್ಯರ್ ಬೆಂಬಲಕ್ಕಿ ನಿಂತಿದ್ದು, ಯುವ ನಾಯಕನನ್ನು ನಿರ್ಣಯಿಸುವ ಮೊದಲು ಅವರಿಗೆ ಹೆಚ್ಚಿನ ಸಮಯ ನೀಡಿ ಎಂದು ಹೇಳಿದ್ದಾರೆ.

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಭಾರತ ಸತತ ನಾಲ್ಕು ಸೋಲುಗಳನ್ನು ಅನುಭವಿಸಿದ್ದು, ಅಯ್ಯರ್ ನಾಯಕತ್ವದಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಈ ನಿರಾಶಾದಾಯಕ ಫಲಿತಾಂಶ ಅಯ್ಯರ್ ಅವರ ಕಾರ್ಯತಂತ್ರದ ನಿರ್ಧಾರಗಳು ಮತ್ತು ಭಾರತ ಅವರಿಗೆ ನಾಯಕತ್ವ ವಹಿಸಿದ ಕ್ರಿಕೆಟ್ ನಿಯಂತ್ರಣ ಮಂಡಳಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಆದಾಗ್ಯೂ, ಈ ಟೀಕೆಗಳು ತುಂಬಾ ಬೇಗ ಬಂದಿವೆ ಎಂದಿರುವ ಡಿವಿಲಿಯರ್ಸ್, ಕೆಲವೇ ಪಂದ್ಯಗಳಿಂದ ನಾಯಕನ ಸಾಮರ್ಥ್ಯ ಅಳೆಯುವುದು ಸರಿಯಲ್ಲ. ಅಯ್ಯರ್ ಅವರ ನಾಯಕತ್ವದ ಬಗ್ಗೆ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೊದಲು ಅಭಿಮಾನಿಗಳು ಮತ್ತು ತಜ್ಞರು ಅವರಿಗೆ ಸಮಯ ನೀಡಬೇಕೆಂದು ಒತ್ತಾಯಿಸಿದ್ದಾರೆ.

shreyas iyer
ಐರ್ಲೆಂಡ್ ವಿರುದ್ಧ ಟಿ20ಐ ಸರಣಿ ಸೋಲು ಮುಜುಗರವಲ್ಲ, ಬದಲಿಗೆ 'ಖಿನ್ನತೆ' ಉಂಟು ಮಾಡಿತು: ಶ್ರೇಯಸ್ ಅಯ್ಯರ್

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್‌ಮನ್, ಶ್ರೇಯಸ್ ಅಯ್ಯರ್ ಅವರಿಗೆ ನಾಯಕನಾಗಿ ತಮ್ಮನ್ನು ತಾವು ಸಾಬೀತುಪಡಿಸಲು ದೀರ್ಘಾವಧಿಯ ಅವಕಾಶವನ್ನು ನೀಡಬೇಕು. ಕೇವಲ 2 ಅಥವಾ 3 ಪಂದ್ಯಗಳ ಫಲಿತಾಂಶವನ್ನು ಆಧರಿಸಿ ಒಬ್ಬ ನಾಯಕನ ಸಾಮರ್ಥ್ಯವನ್ನು ನಿರ್ಣಯಿಸುವುದು ಸಂಪೂರ್ಣವಾಗಿ ತಪ್ಪು ಮತ್ತು ಅನ್ಯಾಯ ಎಂದಿದ್ದಾರೆ.

ಅಯ್ಯರ್ ಈಗಾಗಲೇ ಫ್ರಾಂಚೈಸಿ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ನಾಯಕತ್ವವನ್ನು ಸಾಬೀತುಪಡಿಸಿದ್ದಾರೆ. ಅಲ್ಲಿ ಅವರು ಒತ್ತಡದ ಪರಿಸ್ಥಿತಿಯಲ್ಲಿ ಶಾಂತ ಮತ್ತು ಸಂಯಮದ ವರ್ತನೆ ತಂಡಕ್ಕೆ ದೊಡ್ಡ ಬಲ ನೀಡಿದೆ ಎಂದು ಶ್ಲಾಘಿಸಿದ್ದಾರೆ. ಆ ಗುಣಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮೌಲ್ಯಯುತವಾಗಿರುತ್ತವೆ ಮತ್ತು ತಂಡದ ನಿರ್ವಹಣೆಯ ಬೆಂಬಲವನ್ನು ಪಡೆದರೆ ಅಯ್ಯರ್ ಯಶಸ್ವಿ ನಾಯಕನಾಗಿ ಬೆಳೆಯಲು ಸಹಾಯ ಮಾಡುತ್ತದೆ ಎಂದು ಎಬಿಡಿ ಹೇಳಿದ್ದಾರೆ.

ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಯಶಸ್ವಿ ನಾಯಕತ್ವದ ಅವಧಿಯ ನಂತರ, ಭಾರತದ ಟಿ20 ತಂಡದ ಚುಕ್ಕಾಣಿ ಹಿಡಿದಿರುವ ಅಯ್ಯರ್ ಸದ್ಯ ತೀವ್ರ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟ್ರೆಂಟ್ ಬ್ರಿಡ್ಜ್ ಪಂದ್ಯದಲ್ಲಿ ದಾಖಲಾದ ಭಾರಿ ಸೋಲಿನ ನಂತರ ತಂಡದ ಮೇಲೆ ಒತ್ತಡ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com