ಹರಾರೆ: ಇಲ್ಲಿ ಗುರುವಾರ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಟಿ20ಐ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಕೂಡ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ವೇಗದ ಬೌಲರ್ ಅಶೋಕ್ ಶರ್ಮಾ ಭಾರತದ ಪರ ಪದಾರ್ಪಣೆ ಮಾಡಿದ್ದಾರೆ.
ಭಾರತವು ಇದೇ ಮೊದಲ ಬಾರಿಗೆ ಪಂದ್ಯಕ್ಕೂ ಮುನ್ನವೇ 'ಕನ್ಕಶನ್ ಸಬ್ಸ್ಟಿಟ್ಯೂಟ್'ಗಳ (ಬದಲಿ ಆಟಗಾರರ) ಪಟ್ಟಿಯನ್ನು ಪ್ರಕಟಿಸಿದೆ. ಅಗತ್ಯವಿದ್ದಲ್ಲಿ ನಿರ್ದಿಷ್ಟ ಪಾತ್ರದಲ್ಲಿರುವ ಆಟಗಾರನ ಬದಲಿಗೆ ಕಣಕ್ಕಿಳಿಯಲು ಪ್ರತಿಯೊಬ್ಬ ಆಟಗಾರನನ್ನು ನಿಯೋಜಿಸಲಾಗಿದೆ.
ಈ ಪಟ್ಟಿಯಲ್ಲಿ ಸೂರ್ಯಾಂಶ್ ಶೆಡ್ಗೆ (ಬ್ಯಾಟರ್, ಆಲ್-ರೌಂಡರ್), ಪ್ರಭ್ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಹರ್ಷ್ ದುಬೆ (ಸ್ಪಿನ್ನರ್) ಮತ್ತು ಯಶ್ ಠಾಕೂರ್ (ವೇಗದ ಬೌಲರ್) ಸ್ಥಾನ ಪಡೆದಿದ್ದಾರೆ.
ಈಮಧ್ಯೆ, ಬಲಗಾಲಿನ ಹ್ಯಾಮ್ಸ್ಟ್ರಿಂಗ್ ಗಾಯದ ಕಾರಣದಿಂದಾಗಿ ಜಿಂಬಾಬ್ವೆ ಬ್ಯಾಟರ್ ಮಿಲ್ಟನ್ ಶುಂಬಾ ಅವರು ಟಿ20ಐ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇನ್ನೋಸೆಂಟ್ ಕೈಯಾ ಅವರನ್ನು ಆಯ್ಕೆ ಮಾಡಲಾಗಿದೆ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಅಶೋಕ್ ಶರ್ಮಾ, ಮಯಾಂಕ್ ಯಾದವ್.
ಜಿಂಬಾಬ್ವೆ: ಬ್ರಿಯಾನ್ ಬೆನೆಟ್, ಬೆನ್ ಕರನ್, ಡಿಯೋನ್ ಮೈಯರ್ಸ್, ಸಿಕಂದರ್ ರಜಾ (ನಾಯಕ), ರಿಯಾನ್ ಬರ್ಲ್, ವೆಸ್ಲಿ ಮಾಧೆವೆರೆ, ತಡಿವಂಶೆ ಮರುಮಾನಿ (ವಿಕೆಟ್ ಕೀಪರ್), ಬ್ರಾಡ್ ಇವಾನ್ಸ್, ನ್ಯೂಮನ್ ನ್ಯಾಮ್ಹುರಿ, ರಿಚರ್ಡ್ ನಗರವಾ, ಬ್ಲೆಸ್ಸಿಂಗ್ ಮುಜರಬಾನಿ.