

ಮುಂಬೈ: ಭಾರತದ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಮುಂದಿನ ತಿಂಗಳು ನಡೆಯಲಿರುವ ಶ್ರೀಲಂಕಾ ಪ್ರವಾಸಕ್ಕಾಗಿ ಆಯ್ಕೆಯಾದ ಭಾರತ ಅಂಡರ್-19 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಶ್ರೀಲಂಕಾದಲ್ಲಿ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಪ್ರಕಟಿಸಲಾದ ಭಾರತ ಅಂಡರ್-19 ಏಕದಿನ ತಂಡದಲ್ಲಿ ಅನ್ವಯ್ಗೆ ಅವಕಾಶ ನೀಡಲಾಗಿದೆ. ತಂಡದಲ್ಲಿ ರಜತ್ ಬಘೇಲ್ ಜೊತೆಗೆ ವಿಕೆಟ್ಕೀಪರ್-ಬ್ಯಾಟರ್ ಆಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆದ ವರ್ಷದ ನವೆಂಬರ್ನಲ್ಲಿ ಭಾರತ ‘ಎ’, ಭಾರತ ‘ಬಿ’ ಹಾಗೂ ಅಫ್ಘಾನಿಸ್ತಾನ ಅಂಡರ್-19 ತಂಡಗಳ ನಡುವೆ ನಡೆದ ತ್ರಿಕೋನ ಸರಣಿಯಲ್ಲಿ ಅನ್ವಯ್ ಭಾರತ ಅಂಡರ್-19 ‘ಬಿ’ ತಂಡವನ್ನು ಪ್ರತಿನಿಧಿಸಿದ್ದರು.
17 ವರ್ಷದ ಅನ್ವಯ್, 2025ರ ಬಿಸಿಸಿಐ ಅಂಡರ್-19 ಏಕದಿನ ಚಾಲೆಂಜರ್ ಟ್ರೋಫಿಗಾಗಿ ಆಯ್ಕೆಯಾದ ನಾಲ್ಕು ತಂಡಗಳಲ್ಲಿ ಒಂದರ ಭಾಗವಾಗಿದ್ದರು. ಅಗ್ರ ಕ್ರಮಾಂಕದ ಬ್ಯಾಟರ್ ಹಾಗೂ ವಿಕೆಟ್ಕೀಪರ್ ಆಗಿರುವ ಅವರು, ಪ್ರತಿಭಾವಂತ ಯುವ ಕ್ರಿಕೆಟಿಗರಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ವೇದಿಕೆಯಾಗಿರುವ ಈ ವಾರ್ಷಿಕ ಟೂರ್ನಿಯಲ್ಲಿ ಟೀಮ್ ಸಿ ಪರ ಆಡಿದ್ದರು.
ಅಂದಹಾಗೆ ಭಾರತ ಅಂಡರ್-19 ಏಕದಿನ ತಂಡವನ್ನು ಯಶಬರ್ಧನ್ ಸಿಂಗ್ ಚೌಹಾಣ್ ಮುನ್ನಡೆಸಲಿದ್ದು, ಲಕ್ಷ್ಯ ರೈಚಂದಾನಿ ಉಪನಾಯಕರಾಗಿರುತ್ತಾರೆ.
ಶ್ರೀಲಂಕಾದಲ್ಲಿ ನಡೆಯಲಿರುವ ಎರಡು ಬಹುದಿನಗಳ ಪಂದ್ಯಗಳಲ್ಲಿಯೂ ಯಶಬರ್ಧನ್ ತಂಡದ ನಾಯಕರಾಗಿರುತ್ತಾರೆ. ಆ ತಂಡದಲ್ಲಿ ಮಾನವ್ ಕೃಷ್ಣ ಹಾಗೂ ಆರ್ಯನ್ ಸಂದೇಶ್ ಸಕ್ಪಾಲ್ ವಿಕೆಟ್ಕೀಪರ್ಗಳಾಗಿ ಆಯ್ಕೆಯಾಗಿದ್ದಾರೆ.
ಭಾರತ ಪುರುಷರ ಅಂಡರ್-19 ಏಕದಿನ ತಂಡ ಇಂತಿದೆ
ಯಶಬರ್ಧನ್ ಸಿಂಗ್ ಚೌಹಾಣ್ (ನಾಯಕ), ಲಕ್ಷ್ಯ ರೈಚಂದಾನಿ (ಉಪನಾಯಕ), ಸಾಗರ್ ವಿರ್ಕ್, ವಿನೀತ್ ವಿ.ಕೆ., ಅರ್ಜುನ್ ರಾಜ್ಪುತ್, ಕುಶಾಗ್ರ ಓಜಾ, ರಜತ್ ಬಘೇಲ್ (ವಿಕೆಟ್ಕೀಪರ್), ಅನ್ವಯ್ ದ್ರಾವಿಡ್ (ವಿಕೆಟ್ಕೀಪರ್), ಅನ್ಮೋಲ್ಜೀತ್ ಸಿಂಗ್, ವುಟ್ಕುರಿ ಯಶ್ವೀರ್ ಗೌಡ್, ರೋಹಿತ್ ಅನಿಲ್ ಯಾದವ್, ಶಾವಿನ್ ವಿ., ಕಾವ್ಯ ಪರೇಶ್ ಪಟೇಲ್, ಮೋಹಿತ್ ಉಲ್ವಾ, ಇಶಾನ್ ಸೂದ್.
ಭಾರತ ಪುರುಷರ ಅಂಡರ್-19 ಬಹುದಿನಗಳ ತಂಡ
ಯಶಬರ್ಧನ್ ಸಿಂಗ್ ಚೌಹಾಣ್ (ನಾಯಕ), ಲಕ್ಷ್ಯ ರೈಚಂದಾನಿ (ಉಪನಾಯಕ), ಸಾಗರ್ ವಿರ್ಕ್, ಪಟೇಲ್ ಕುಶ್, ಮನಾಲ್ ಚೌಹಾಣ್, ಕುಶಾಗ್ರ ಓಜಾ, ಮಾನವ್ ಕೃಷ್ಣ (ವಿಕೆಟ್ಕೀಪರ್), ಆರ್ಯನ್ ಸಂದೇಶ್ ಸಕ್ಪಾಲ್ (ವಿಕೆಟ್ಕೀಪರ್), ಹೇಮಚುದೇಶನ್ ಜೆ., ಬಿ.ಕೆ. ಕಿಶೋರ್, ರೋಹಿತ್ ಅನಿಲ್ ಯಾದವ್, ಕಾವ್ಯ ಪರೇಶ್ ಪಟೇಲ್, ಪ್ರಿಯಾಂಶು ಸಿಂಗ್, ಪ್ರಣವ್ ರಾಘವೇಂದ್ರ, ಚಿಗುರುಪಾಟಿ ವೆಂಕಟ.
Advertisement