

ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯಕ್ಕಾಗಿ ಭಾರತ ಕ್ರಿಕೆಟ್ ತಂಡದಲ್ಲಿ ವೇಗಿ ಹರ್ಷಿತ್ ರಾಣಾ ಅವರನ್ನು ಸೇರಿಸಿಕೊಳ್ಳಲಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಜಯಗಳಿಸುವ ಮೂಲಕ ಭಾರತ ಈಗಾಗಲೇ ಮೂರು ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ. ಮೂರನೇ ಪಂದ್ಯ ಶನಿವಾರ ಚೆನ್ನೈನಲ್ಲಿ ನಡೆಯಲಿದೆ.
2026ರ ಟಿ20 ವಿಶ್ವಕಪ್ಗೆ ಮುನ್ನ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ಸಮಯದಲ್ಲಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದ ನಂತರ ಹರ್ಷಿತ್ ರಾಣಾ ಭಾರತ ತಂಡದಿಂದ ಹೊರಗುಳಿದಿದ್ದರು. ಬಳಿಕ ಭಾರತ ತಂಡವು ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯಗಳಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗಾಯದಿಂದಾಗಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದಲೂ ಹೊರಗುಳಿದಿದ್ದರು. ಐಪಿಎಲ್ನಲ್ಲಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಪರ ಆಡಬೇಕಿತ್ತು.
'ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ)ನಲ್ಲಿ ಪುನರ್ವಸತಿ ಪೂರ್ಣಗೊಳಿಸಿರುವ ಹರ್ಷಿತ್ ರಾಣಾ, ಚೆನ್ನೈನಲ್ಲಿರುವ ಭಾರತ ಏಕದಿನ ತಂಡದೊಂದಿಗೆ ಸೇರಲಿದ್ದಾರೆ' ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
24 ವರ್ಷದ ಹರ್ಷಿತ್ ರಾಣಾ ಅವರು ಭಾರತ ಪರ 14 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 27.38 ಸರಾಸರಿ ಮತ್ತು 6.21ರ ಎಕಾನಮಿ ದರದಲ್ಲಿ 16 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ವರ್ಷದ ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆದ T20I ಸರಣಿಯಲ್ಲಿ ಭಾರತ ಪರ ಅವರು ಕೊನೆಯ ಬಾರಿಗೆ ಕಾಣಿಸಿಕೊಂಡರು. ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ರಾಣಾ ಅವರನ್ನು ಹೆಸರಿಸಲಾಗಿದೆ. ಅಲ್ಲಿ ತಂಡವು ಏಳು T20Iಗಳನ್ನು ಆಡಲು ನಿರ್ಧರಿಸಲಾಗಿದೆ.
ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ಕೀಪರ್), ಇಶಾನ್ ಕಿಶನ್ (ವಿಕೆಟ್ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ.
Advertisement