ನಂದಿತಾ ತಂದೆ ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ

ಇತ್ತೀಚೆಗೆ ನಿಗೂಢವಾಗಿ ಸಾವನ್ನಪ್ಪಿದ್ದ ತೀರ್ಥಹಳ್ಳಿ ವಿದ್ಯಾರ್ಥಿನಿ...
ವಿದ್ಯಾರ್ಥಿನಿ ನಂದಿತಾಳ ತಂದೆ ಕೃಷ್ಣಮೂರ್ತಿ
ವಿದ್ಯಾರ್ಥಿನಿ ನಂದಿತಾಳ ತಂದೆ ಕೃಷ್ಣಮೂರ್ತಿ

ತೀರ್ಥಹಳ್ಳಿ: ಇತ್ತೀಚೆಗೆ ನಿಗೂಢವಾಗಿ ಸಾವನ್ನಪ್ಪಿದ್ದ ತೀರ್ಥಹಳ್ಳಿ ವಿದ್ಯಾರ್ಥಿನಿ ನಂದಿತಾಳ ತಂದೆ ಕೃಷ್ಣಮೂರ್ತಿ ಅವರ ಅಂಗಡಿಗೆ ಶುಕ್ರವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಬೆಳಿಗ್ಗೆ ಸುಮಾರು 2.30ರ ಸಮಯದಲ್ಲಿ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿರುವ ಕೃಷ್ಣಮೂರ್ತಿ ಅವರ ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಅಂಗಡಿ ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಸುಮಾರು 4 ರಿಂದ 5 ಲಕ್ಷ ಮೌಲ್ಯದ ಸಾಮಾನುಗಳು ನಷ್ಟ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿದ್ದ ಆಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿ ಅನಾಹುತದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸರು ಈಗಾಗಲೇ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಇಡೀ ರಾಜ್ಯದಲ್ಲಿ ಸದ್ದು ಮಾಡಿದ್ದ ತೀರ್ಥಹಳ್ಳಿ ನಂದಿತಾ ಸಾವಿನ ಪ್ರಕರಣಕ್ಕೆ ಮೂರು ದಿನಗಳ ಹಿಂದಷ್ಟೇ ವರದಿ ನೀಡಿದ್ದ ಸಿಐಡಿ ಅಧಿಕಾರಿಗಳು, ನಂದಿತಾ ಸಾವು ಕೊಲೆಯಲ್ಲ. ಆತ್ಮಹತ್ಯೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿತ್ತು. ಈ ಹೇಳಿಕೆಗೆ ತೀರ್ಥಹಳ್ಳಿಯಲ್ಲಿ ಹಿಂಸಾಚಾರ ಭುಗಿಲೆದ್ದು 15 ದಿನಗಳ ಕಾಲ ಸ್ಥಳದಲ್ಲಿ ಪೊಲೀಸರು ನಿಷೇಧಾಜ್ಞೆಯನ್ನು ಜಾರಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com