ಸ್ವಾಮೀಜಿಗೆ ಜೀವಾವಧಿ

ಸ್ವಾಮೀಜಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ರೂ.25.000 ದಂಡ...
ಚಿಕ್ಕಮಗಳೂರು ಶಿವಾಚಾರ್ಯ ಸ್ವಾಮೀಜಿಗೆ ಜೀವಾವಧಿ ಶಿಕ್ಷೆ
ಚಿಕ್ಕಮಗಳೂರು ಶಿವಾಚಾರ್ಯ ಸ್ವಾಮೀಜಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಆರು ವರ್ಷ ಹಿಂದೆ ಮಹಿಳೆಯನ್ನು ಕೊಲೆ ಮಾಡಿದ ಆರೋಪವನ್ನು ಎದುರಿಸುತ್ತಿದ್ದ ಮೊಹಂತಿ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ರೂ.25.000 ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ನ್ಯಾಯಾಲಯವು ಗುರುವಾರ ತೀರ್ಪು ನೀಡಿದೆ.

2008ರ ಡಿ.10ರಂದು ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಾವತಿ ಕೊಲೆ ಆರೋಪದ ಮೇಲೆ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಮಹಮದ್ ಅಸೂದ್, ಫಾರೂಕ್ ಹಾಗೂ ವಾಹನ ಚಾಲಕ ಲತೀಫ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಲತೀಫ್ ತಲೆಮರೆಸಿಕೊಂಡಿದ್ದು, ಉಳಿದ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಧೀಶ ಬಿ.ನಂದಕುಮಾರ್ ಆದೇಶ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com