ಬಿಎಂಟಿಸಿ ಬಸ್ ಅಪಘಾತ: ನಾಲ್ವರು ಸಾವು

ಬಿಎಂಟಿಸಿ ಬಸ್ ಬ್ರೇಕ್ ವಿಫಲವಾಗಿ ಸರಣಿ ಅಪಘಾತ...
ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬಿಎಂಟಿಸಿ ಬಸ್ ಬ್ರೇಕ್ ವಿಫಲವಾಗಿ ಒನ್‌ವೇಗಿ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಲಿಂಗರಾಜುಪರಂ ಬಳಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶಿವಾಜಿನಗರದಿಂದ ಲಿಂಗಾರಾಜಪುರಂಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಲಿಂಗಾರಾಜಪುರಂ ಸಮೀಪ ಬ್ರೇಕ್ ಫೇಲ್ಯೂರ್ ಆಗಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಒನ್‌ನೇಗೆ ನುಗ್ಗಿದೆ. ಈ ವೇಳೆ ಗೂಡ್ಸ್ ಗಾಡಿಗೆ ವೇಗವಾಗಿ ಗುದ್ದಿದೆ. ಗೂಡ್ಸ್‌ಗಾಡಿಯ ಹಿಂದೆ ನಿಂತಿದ್ದ ಬೈಕ್‌ಗೆ ಗೂಡ್ಸ್ ಗಾಡಿ ಗುದ್ದಿಗೆ.

ಈ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದರು. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬರು ಸಾವನ್ನಪ್ಪಿದರು. ಈ ಮೂಲಕ ಸರಣಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಘಟನೆಯಿಂದಾಗಿ ಲಿಂಗರಾಜಪುರಂ ಬಳಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com