ಬೆಂಗಳೂರು: ರಾಜ್ಯ ಸರ್ಕಾರ ಇಂಗ್ಲೆಂಡ್ನ ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಖ್ಯಾತ ಸಮಾಜಶಾಸ್ತ್ರಜ್ಞ ಪ್ರೊ. ಎಂ.ಎನ್.ಶ್ರೀನಿವಾಸ್ ಅವರ ಹೆಸರಿನಲ್ಲಿ ಅಧ್ಯಯನ ಪೀಠ ಹಾಗೂ ದತ್ತಿ ಕೇಂದ್ರ ಸ್ಥಾಪನೆಗೆ ಮುಂದಾಗಿದೆ.
ಆಕ್ಸ್ಫರ್ಡ್ ವಿವಿ ಕುಲಪತಿಯೊಂದಿಗೆ ಚರ್ಚಿಸಿದ ಬಳಿಕ ಆಕ್ಸ್ಫರ್ಡ್ ವಿವಿಯ ಸಹಯೋಗದಲ್ಲಿ ಪ್ರೊ.ಎಂ.ಎನ್.ಶ್ರೀನಿವಾಸ್ ಅಧ್ಯಯನ ಪೀಠ ಸ್ಥಾಪನೆಗೆ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ಕುರಿತು ರೂಪುರೇಷೆ ರಚಿಸಲು ರಾಜ್ಯ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಡಾ.ಗೀತಾ ಬಾಲಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ.
ಈ ತಜ್ಞರ ಸಮಿತಿ ನೀಡುವ ಶಿಫಾರಸಿನ ಆಧಾರದಲ್ಲಿ ವಿಶೇಷ ದತ್ತಿ-ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.
Advertisement