ರಾಘವೇಶ್ವರ ಶ್ರೀಗಳಿಗೆ ಷರತ್ತುಬದ್ಧ ಜಾಮೀನು

ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಅತ್ಯಾಚಾರ ಆರೋಪ ಹೊತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು
ಅತ್ಯಾಚಾರ ಆರೋಪ ಹೊತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು

ಬೆಂಗಳೂರು: ರಾಮಕಥಾ ಕಲಾವಿದೆಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಇಂದು ಪ್ರಕರಣದ ವಿಚಾರಣೆಯನ್ನು ನಡೆಸಿದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತನಿಖಾಧಿಕಾರಿಗಳಿಗೆ ಮನೆಯ ವಿಳಾಸ ನೀಡಬೇಕು, ಒಂದು ಲಕ್ಷ ಬಾಂಡ್ ಮತ್ತು ಇಬ್ಬರ ಭದ್ರತೆಯ ಆಶ್ವಾಸನೆಯ ಮೇರೆಗೆ ಶ್ರೀಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇದಲ್ಲದೆ ಸಾಕ್ಷ್ಯ ನಾಶಪಡಿಸದಂತೆ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ, ತನಿಖೆಯ ಮೇಲೆ ಪ್ರಭಾವ ಬೀರದಂತೆ ಎಚ್ಚರಿಕೆ ನೀಡಲಾಗಿದೆ.

ಇದೇ ಪ್ರಕರಣ ಸಂಬಂಧ ಈ ಹಿಂದೆ ನಡೆದ ವಿಚಾರಣೆಯಲ್ಲಿ ಶ್ರೀಗಳಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದಾದ ಬಳಿಕ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿಯೂ ಶ್ರೀಗಳಿಗೆ ಜಾಮೀನು ಮಂಜೂರು ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಈ ಹಿಂದೆ ಶ್ರೀಗಳಿಗೆ ನೋಟಿಸ್ ಜಾರಿ ಮಾಡಿದ್ದರು. ಸಿಐಡಿ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು  ವಿಚಾರಣೆಗೆ ಹಾಜರಾಗಬೇಕು ಎಂದು ಶ್ರೀಗಳಿಗೆ ನೋಟಿಸ್ ಜಾರಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com