ಮರಕ್ಕೆ ಖಾಸಗಿ ಬಸ್ ಡಿಕ್ಕಿ: 5ಕ್ಕೇರಿದ ಸಾವಿನ ಸಂಖ್ಯೆ

ಮರಕ್ಕೆ ಖಾಸಗಿ ಬಸ್ ಡಿಕ್ಕಿ(ಸಾಂದರ್ಭಿಕ ಚಿತ್ರ)
ಮರಕ್ಕೆ ಖಾಸಗಿ ಬಸ್ ಡಿಕ್ಕಿ(ಸಾಂದರ್ಭಿಕ ಚಿತ್ರ)

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಇಂದು ಬೆಳಗ್ಗೆ 5.30ರ ಸುಮಾರಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಸಮೀಪ ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಶಿಕಾರಿಪುರದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರನ್ನು ಲಕ್ಷ್ಮಮ್ಮ, ವಿಷ್ಣು, ವಿಶ್ವನಾಥ್ ಹಾಗೂ ದೀಪ್ತಿ ಎಂದು ಗುರುತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com