ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ಕಮ್ಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಆಯ್ಯಣ್ಣ ಎಂಬಾತನ ಮೇಲೆ..
ಎಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂ (ಸಾಂದರ್ಭಿಕ ಚಿತ್ರ)
ಎಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂ (ಸಾಂದರ್ಭಿಕ ಚಿತ್ರ)

ಬೆಂಗಳೂರು: ಕಮ್ಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಆಯ್ಯಣ್ಣ ಎಂಬಾತನ ಮೇಲೆ ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ.

ಸೋಮವಾರ ರಾತ್ರಿ 11.30ರ ಸುಮಾರಿಗೆ ಅಯ್ಯಣ್ಣ ಎಟಿಎಂ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಮದ್ಯದ ನಶೆಯಲ್ಲಿದ್ದ ಇಬ್ಬರು ಎಟಿಎಂ ಕೇಂದ್ರದ ಮುಂದೆ ಜಗಳ ಮಾಡುತ್ತಿದ್ದರು. ಸ್ಥಳಕ್ಕೆ ಬಂದ ಅಯ್ಯಣ್ಣ ಎಟಿಎಂ ಕೇಂದ್ರದ ಮುಂದೆ ಜಗಳ ಮಾಡಬೇಡಿ ನಡೀರಿ ಎಂದು ಹೇಳಿದ್ದಾನೆ. ಇದರಿಂದ ಕುಪಿತಗೊಂಡ ಆರೋಪಿಗಳು ಅಯ್ಯಣ್ಣನ ಕೈಯಲ್ಲಿದ್ದ ಲಾಠಿಯನ್ನು ಕಿತ್ತುಗೊಂಡು ಹಲ್ಲೆ ನಡೆಸಿದ್ದಾರೆ. ಕಿರುಚಾಟ ಕೇಳಿದ ಪಕ್ಕದ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಗಮ್ಮನ ಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com