ಸಚಿವ ಗಿರಿರಾಜ್‍ರನ್ನು ಸಂಪುಟದಿಂದ ಕೈಬಿಡಿ

ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಇದು ಬಿಜೆಪಿ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ...
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಇದು ಬಿಜೆಪಿ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ.

ಪ್ರಧಾನಿ ಮೋದಿ ಈ ಸಚಿವನನ್ನು ಸಂಪುಟದಿಂದ ಶೀಘ್ರ ಕೈಬಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ. ಸೋನಿಯಾ ಅವರ ಬಣ್ಣದ ವಿಷಯದ ಬಗ್ಗೆ ಪ್ರಸ್ತಾಪ ಮಾಡಿ, ಚಾರಿತ್ರ್ಯಹರಣ ಮಾಡುವ ಪ್ರಯತ್ನ ಮಾಡಿದ್ದಾರೆ.

ಯಾವುದೇ ವ್ಯಕ್ತಿಯ ವೈಯುಕ್ತಿಕ ಚಾರಿತ್ರ್ಯಹರಣ ಅಪರಾಧ. ಸೋನಿಯಾ ದೇಶದ ಸಂಸ್ಕೃತಿಯನ್ನು ಎತ್ತಿಹಿಡಿದವರಾಗಿದ್ದಾರೆ. ಇಂಥವರ ಮೇಲೆ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಇದನ್ನು ಪಕ್ಷಾತೀತವಾಗಿ ಖಂಡಿಸಬೇಕು. ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com