ಕಾರು- ಲಾರಿ ಮುಖಾಮುಖಿ ಡಿಕ್ಕಿ: 3 ಸಾವು

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಬರಜೀರಳ್ಳಿಯಲ್ಲಿ ಇಂದು ಮುಂಜಾನೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಕಾರು- ಲಾರಿ ಮುಖಾಮುಖಿ ಡಿಕ್ಕಿ(ಸಾಂದರ್ಭಿಕ ಚಿತ್ರ)
ಕಾರು- ಲಾರಿ ಮುಖಾಮುಖಿ ಡಿಕ್ಕಿ(ಸಾಂದರ್ಭಿಕ ಚಿತ್ರ)
Updated on

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಬರಜೀರಳ್ಳಿಯಲ್ಲಿ ಇಂದು ಮುಂಜಾನೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದಾರೆ.

ತುಮಕೂರಿನಿಂದ ನಾಗಮಂಗಲಕ್ಕೆ ಕಾರಿನಲ್ಲಿ ತೆರಳುತ್ತಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಲಜಾಕ್ಷಿ(55), ರತ್ನಮ್ಮ(53), ಹಾಗೂ ನಂಜಪ್ಪ(68) ಮೃತಪಟ್ಟಿದ್ದಾರೆ. ಮತ್ತೆ ಕಾರಿನಲ್ಲಿದ್ದ ಮೂವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಕೆ ಆರ್ ಎಸ್ ನ ರೈಲ್ವೇ ಸ್ಟೇಷನ್ ರಸ್ತೆ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com