ಬೆಂಗಳೂರು: ತಮ್ಮ ಮಗಳ ಮೇಲೆ ಆಕೆಯ ಪತಿಯ ಸಹೋದರನೆ ಅತ್ಯಾಚಾರ ನಡೆಸಿದ್ದಾನೆ ಎಂದು ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ಪೂರ್ವ ವಲಯ ಡಿಸಿಪಿ ಸತೀಶ್ ಅವರಿಗೆ ದೂರು ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ಮೈಸೂರಿನ ಪ್ರಸಿದ್ದ ಉದ್ಯಮಿಯ ವಿರುದ್ದ ನಿವೃತ್ತ ಐಎಎಸ್ ಅಧಿಕಾರಿ ಅತ್ಯಾಚಾರ ಆರೋಪ ಮಾಡಿದ್ದಾರೆ. ಅಲ್ಲದೆ ತಮ್ಮ ಮಗಳಿಗೆ ಆಕೆಯ ಪತಿ, ಮಾವ ಮತ್ತು ಅತ್ತೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಘಟನೆ ಮೈಸೂರಿನಲ್ಲಿ ನಡೆದ ಹಿನ್ನಲೆಯಲ್ಲಿ ಪ್ರಕರಣವನ್ನು ಡಿಸಿಪಿ ಸತೀಶ್ ಅವರು ಮೈಸೂರಿಗೆ ವರ್ಗಾವಣೆ ಮಾಡಿದ್ದಾರೆ. ಮೈಸೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.
Advertisement