ಬಂದ್‍ಗೆ ಬಂದೋಬಸ್ತ್

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ `ರಸ್ತೆ ಸುರಕ್ಷತಾ ಮಸೂದೆ' ವಿರೋಧಿಸಿ ಏ.30ರಂದು ವಿವಿಧ ಕಾರ್ಮಿಕ ಸಂಘಟನೆಗಳ ಕರೆ ನೀಡಿರುವ...
ಕರ್ನಾಟಕ ಬಂದ್(ಸಾಂದರ್ಭಿಕ ಚಿತ್ರ)
ಕರ್ನಾಟಕ ಬಂದ್(ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ `ರಸ್ತೆ ಸುರಕ್ಷತಾ ಮಸೂದೆ' ವಿರೋಧಿಸಿ ಏ.30ರಂದು ವಿವಿಧ ಕಾರ್ಮಿಕ ಸಂಘಟನೆಗಳ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, `ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಆದರೆ, ಬಲವಂತವಾಗಿ ಜನರನ್ನು ಬಂದ್‍ನಲ್ಲಿ ಪಾಲ್ಗೊಳ್ಳಲು ಒತ್ತಾಯಿಸಿದರೆ ಕ್ರಮ ಜರುಗಿಸಲಾಗುತ್ತದೆ. ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್ ಗಳ ಸಂಚಾರಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಸಂಬಂಧ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಸಂಚರಿಸುವ ಬಸ್ ಗಳಿಗೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗುತ್ತದೆ ಎಂದರು.

ಬಂದ್ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದ್ದು, ಇದಕ್ಕೆ ಸಂಘಟನೆಗಳೂ ಸಹಕರಿಸುವಂತೆ ಆಯುಕ್ತರು ಮನವಿ ಮಾಡಿದರು. ಕೇಂದ್ರ ಸರ್ಕಾರದ `ರಸ್ತೆ ಸುರಕ್ಷತಾ ಮಸೂದೆ' ವಿರೋಧಿಸಿ ಸಾರಿಗೆ ಇಲಾಖೆಯ ನೌಕರರ ಸಂಘಟನೆಗಳ ಸೇರಿದಂತೆ ಎಡಪಂಥೀಯ ಸಂಘಟನೆಗಳು ರಾಷ್ಟ್ರ ವ್ಯಾಪ್ತಿ ಏ.30ರಂದು 14 ತಾಸುಗಳು ಬಂದ್‍ಗೆ ಕರೆ ನೀಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com