16ರ ಬಳಿಕ ಬರ ತಾಲೂಕು ಘೋಷಣೆ

ರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳು ಭೀಕರ ಬರಕ್ಕೆ ತುತ್ತಾಗಿದ್ದು, ಆಗಸ್ಟ್ 16ರ ನಂತರಬರಪೀಡಿತ ತಾಲೂಕುಗಳನ್ನು ಸರ್ಕಾರ ಘೋಷಣೆ ಮಾಡಲಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳು ಭೀಕರ ಬರಕ್ಕೆ ತುತ್ತಾಗಿದ್ದು, ಆಗಸ್ಟ್ 16ರ ನಂತರ ಬರಪೀಡಿತ ತಾಲೂಕುಗಳನ್ನು ಸರ್ಕಾರ ಘೋಷಣೆ ಮಾಡಲಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಕಾಣದ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವರ ಜತೆ ನಾನು
ಈಗಾಗಲೇ ಸಭೆ ನಡೆಸಿದ್ದು, ಆಗಸ್ಟ್ 16ರ ನಂತರ ಬರಪೀಡಿತ ತಾಲೂಕುಗಳನ್ನು ಘೋಷಣೆ
ಮಾಡುತ್ತೇವೆ ಎಂದು ಹೇಳಿದರು. ಬರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ
27ರಂದು ರಾಜ್ಯ-ಮಟ್ಟದ ಬ್ಯಾಂಕರ್‍ಗಳು, ಲೀಡ್ ಬ್ಯಾಂಕ್ ಮುಖ್ಯಸ್ಥರ ಜತೆ ಸಭೆ ನಡೆಸಿದೆ. ಬೆಳೆ ಪದ್ಧತಿ, ಹಣಕಾಸು, ಸಾಮಾಜಿಕ ಪರಿಣಾಮ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ರೈತರಿಗೆ ಕೌನ್ಸೆಲಿಂಗ್ ನೀಡಲು ನಿರ್ಧರಿಸಲಾಗಿದೆ.
ಬರ ಪೀಡಿತ ಪ್ರದೇಶಗಳಲ್ಲಿ ಸಾಲ ವಸೂಲಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ. ಸಾಲ ಮರುಪಾವತಿಗೆ ಸಾಕಷ್ಟು ಸಮಯಾವಕಾಶ ನೀಡುವಂತೆ ಬ್ಯಾಂಕರ್‍ಗಳಿಗೆ ಸರ್ಕಾರ ಮನವಿ ಮಾಡಿದೆ ಎಂದರು.






Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com