ಟಾಟಾ ಏಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ: 9 ಮಂದಿ ಸಾವು

ಟಾಟಾ ಏಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ...
ಅಪಘಾತ(ಸಂಗ್ರಹ ಚಿತ್ರ)
ಅಪಘಾತ(ಸಂಗ್ರಹ ಚಿತ್ರ)
Updated on
ಗದಗ: ಟಾಟಾ ಏಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೋಜನೂರು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಒಂಬ್ಬತ್ತು ಮಂದಿ ಮೃತಪಟ್ಟಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರಲ್ಲಿ 8 ಮಂದಿ ರಣತೂರಿನ ನಿವಾಸಿಗಳಾಗಿದ್ದು, ಓರ್ವ ಲಕ್ಷ್ಮೇಶ್ವರ ನಿವಾಸಿ ಎಂದು ಗುರುತಿಸಲಾಗಿದೆ. 
ಅವಘಡದಲ್ಲಿ ಏಸ್‌ನಲ್ಲಿದ್ದ ಇನ್ನೂ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು , ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರೆಂದು ತಿಳಿದು ಬಂದಿದೆ. ಲಕ್ಷ್ಮೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com