ಬೆಂಗಳೂರಿನಲ್ಲಿ ಇಬ್ಬರು ಕುಖ್ಯಾತ ಸರಗಳ್ಳರ ಬಂಧನ: 23 ಚಿನ್ನದ ಸರ ವಶ

ಮಹಿಳೆಯರ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಪ್ರಕರಣವನ್ನು ಬೇಧಿಸಿದ ನಗರ ಪೊಲೀಸರು ಇಬ್ಬರು ಕುಖ್ಯಾತ...
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು

ಬೆಂಗಳೂರು: ಮಹಿಳೆಯರ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಪ್ರಕರಣವನ್ನು ಬೇಧಿಸಿದ ನಗರ ಪೊಲೀಸರು ಇಬ್ಬರು ಕುಖ್ಯಾತ ಸರಗಳ್ಳರನ್ನು ಬುಧವಾರ ಬಂಧಿಸಿದ್ದಾರೆ.

ಮಹಮ್ಮದ್ ಜಬೀವುದ್ದೀನ್ ಮತ್ತು ಮಹಮ್ಮದ್ ಮೆಹ್ತಾಬ್ ಬಂಧಿತ ಆರೋಪಿಗಳು. ಇತ್ತೀಚೆಗೆ ಮಹಿಳೆಯರ ಚಿನ್ನದ ಸರ ಕಸಿದು ಪರಾರಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದಂತೆ ದಕ್ಷಿಣ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರು ಸರಗಳ್ಳರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಬಂಧಿತ ಆರೋಪಿಗಳಿಂದ ರು.21ಲಕ್ಷ ಮೌಲ್ಯದ 23 ಚಿನ್ನದ ಸರಗಳು ವಶಕ್ಕೆ ಪಡೆಯಲಾಗಿದ್ದು, ಇಬ್ಬರ ಬಂಧನದಿಂದಾಗಿ 23 ಸರಗಳ್ಳತನ ಪ್ರಕರಣ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com