ಮಹದಾಯಿ ನೀರಿಗಾಗಿ ನಾಳೆ ಧಾರವಾಡ ಬಂದ್

ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಜೋಡಣೆ ಅನುಷ್ಠಾನಕ್ಕಾಗಿ ಆ.22 ರಂದು ಧಾರವಾಡ ಬಂದ್ ಆಚರಿಸಲು ಪಕ್ಷಾತೀತ ಹೋರಾಟ ಸಮಿತಿ ಕರೆ ನೀಡಿದೆ.
ಬಂದ್ (ಸಾಂದರ್ಭಿಕ ಚಿತ್ರ)
ಬಂದ್ (ಸಾಂದರ್ಭಿಕ ಚಿತ್ರ)
Updated on

ಧಾರವಾಡ: ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಜೋಡಣೆ ಅನುಷ್ಠಾನಕ್ಕಾಗಿ ಆ.22 ರಂದು  ಧಾರವಾಡ ಬಂದ್ ಆಚರಿಸಲು ಪಕ್ಷಾತೀತ ಹೋರಾಟ ಸಮಿತಿ ಕರೆ ನೀಡಿದೆ. ಬೆಳಿಗ್ಗೆ 6 ರಿಂದ ಸಂಜೆ 6 ವರೆಗೆ ಬಂದ್ ನಡೆಯಲಿದೆ.

ಆ.24 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಪ್ರಧಾನಮಂತ್ರಿಯವರನ್ನು ಭೇಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಬಂದ್ ಮಹತ್ವದ್ದಾಗಿದೆ ಎಂದು ಸಮಿತಿ ಸಂಚಾಲಕ ಬಿ.ಡಿ ಹಿರೇಮಠ ಹೇಳಿದರು.

ದಕ್ಷಿಣ ಕರ್ನಾಟಕದ ಈ ಹಿಂದಿನ ಮಹತ್ವದ ಹೋರಾಟಗಳಲ್ಲಿ ಮುಖ್ಯಮಂತ್ರಿ ಆದಿಯಾಗಿ ಸಚಿವ ಸಂಪುಟವೇ ಹೋರಾಟಗಾರರ ಬಳಿ ಬಂದು ಸಮಸ್ಯೆಯನ್ನು ಆಲಿಸಿ ಪರಿಹಾರ ದೊರೆಕಿಸಿದೆ. ಆದರೆ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಎಲ್ಲರೂ ನಿರಾಸಕ್ತಿ ತೋರುತ್ತಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com