ಬಿಬಿಎಂಪಿ ಕಚೇರಿ (ಸಾಂದರ್ಭಿಕ  ಚಿತ್ರ)
ಬಿಬಿಎಂಪಿ ಕಚೇರಿ (ಸಾಂದರ್ಭಿಕ ಚಿತ್ರ)

ಕಾಂಗ್ರೆಸ್‍ನಲ್ಲಿ ಈಗ ಸೋಲಿನ ಕನಿಷ್ಠ ಅಂತರದ ಲೆಕ್ಕಾಚಾರ

ಬಿಬಿಎಂಪಿ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ನಡೆಯುವುದಕ್ಕೆ ಮುನ್ನವೇ ಸೋಲಿನ ಅಂತರದ ಬಗ್ಗೆ ಕಾಂಗ್ರೆಸ್ ನಲ್ಲಿ ಲೆಕ್ಕಾಚಾರ ಆರಂಭವಾಗಿದ್ದು, 100 ರಿಂದ 1000 ಮತಗಳ...
Published on

ಬೆಂಗಳೂರು: ಬಿಬಿಎಂಪಿ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ನಡೆಯುವುದಕ್ಕೆ ಮುನ್ನವೇ ಸೋಲಿನ ಅಂತರದ ಬಗ್ಗೆ ಕಾಂಗ್ರೆಸ್ ನಲ್ಲಿ ಲೆಕ್ಕಾಚಾರ ಆರಂಭವಾಗಿದ್ದು, 100 ರಿಂದ 1000 ಮತಗಳ ಅಂತರದಲ್ಲಿ ಕಾಂಗ್ರೆಸ್ 21 ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ. ಈ ರೀತಿಯಲ್ಲಿ ಒಟ್ಟು 27 ಸ್ಥಾನಗಳನ್ನು ಕಳೆದುಕೊಂಡಿರುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗಿ ಪರಿಣಮಿಸಿದೆ.

ಹೌದು, ಪಕ್ಷದ ಸೋಲಿನ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಬೇಸರಗೊಂಡಿದ್ದಾರೆ. ಜತೆಗೆ ಸೋಲಿಗೆ ಕಾರಣಗಳೇನು ಎಂಬ ಬಗ್ಗೆ ಯೂ ಚರ್ಚೆ ನಡೆಯುತ್ತಿದೆ. ಈ ಹಂತದಲ್ಲಿ ಸಿದ್ದರಾಮಯ್ಯನವರ ಥಿಂಕ್ ಟ್ಯಾಂಕ್ ಮತದಾನದ ಬಳಿಕ ಮಾಹಿತಿ ಸಂಗ್ರಹಿಸಿದ್ದು, ಕೆಲವೇ ಮತಗಳ ಅಂತರದಲ್ಲಿ ಕಾಂಗ್ರೆಸ್ ಹಲವು ಸ್ಥಾನ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ.

ಕಾಂಗ್ರೆಸ್ ನ ಈ ನಷ್ಟದ ಲಾಭ ನೇರವಾಗಿ ಬಿಜೆಪಿಗೆ ಲಭಿಸಿದೆ. ಕಡಿಮೆ ಅಂತರದಲ್ಲಿ ಒಟ್ಟು 24 ಸ್ಥಾನಗಳನ್ನು ಕಾಂಗ್ರೆಸ್ ಬಿಜೆಪಿಗೆ ತಟ್ಟೆಯಲ್ಲಿಟ್ಟುಕೊಟ್ಟಿದೆ. 2 ಸ್ಥಾನಗಳು ಜೆಡಿಎಸ್, 1 ಎಸ್ ಡಿಪಿಐ ಪಾಾಗಿದ್ದರೆ, 3 ವಾರ್ಡ್ ಗಳಲ್ಲಿ ಬಂಡಾಯ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com