ಸರಿಯಾಗಿ ಧರಿಸಿ, ತೋರಿಕೆ ಬೇಡ: ಸಾರಿಗೆ ಆಯುಕ್ತ ಡಾ.ರಾಮಲಿಂಗೆಗೌಡ, ಸವಾರರು ನಾಮಕಾವಸ್ಥೆ ಹೆಲ್ಮೆಟ್ ಧರಿಸದೆ ಗುಣಮಟ್ಟದ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೆ ಸಂಭವಿಸುವ ಅಪಘಾತಗಳಿಂದ ಅವರನ್ನು ನಂಬಿಕೊಂಡಿರುವ ಕುಟುಂಬದವರ ಬಗ್ಗೆ ಯೋಚಿಸಬೇಕು ಎಂದರು. ದಿ ಪ್ರಿಂಟರ್ಸ್ ಮೈಸೂರು ಲಿಮಿಟೆಡ್ ಉಪ ವ್ಯವಸ್ಥಾಪಕ ಎಸ್.ವಿ. ಶ್ರೀನಿವಾಸನ್ ಅವರು ಹೆಲ್ಮೆಟ್ ಮಹತ್ವದ ಬಗ್ಗೆ ಕಿರುಹೊತ್ತಿಗೆ ಬಿಡುಗಡೆ ಮಾಡಿದರು. ಹರ್ಲಿ ಡೇವಿಡ್ ಸನ್ ಇಂಡಿಯಾ ಬುಲ್ ರೈಡರ್ಸ್, ಜಾವಾ ರೈಡರ್ಸ್, ಕೋಬ್ರಾ ಗ್ರೂಪ್ ಹಾಗೂ ಕಾಲೇಜು ವಿದ್ಯಾರ್ಥಿಗಳು ಬೈಕ್ ರ್ಯಾಲಿ ನಡೆಸಿದರು.