ಸಾಹಿತಿ ಕಲ್ಬುರ್ಗಿ ಹತ್ಯೆ ಬಗ್ಗೆ ಟ್ವೀಟ್ ಮಾಡಿದ್ದ ಯುವಕನ ಬಂಧನ

ಸಂಶೋಧಕ, ಸಾಹಿತಿ ಕಲ್ಬುರ್ಗಿ ಹತ್ಯೆ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಯುವಕನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಎಚ್ಚರಿಕೆ ನೀಡಿದ್ದ ಯುವಕನ ಟ್ವೀಟ್
ಎಚ್ಚರಿಕೆ ನೀಡಿದ್ದ ಯುವಕನ ಟ್ವೀಟ್

ಮಂಗಳೂರು: ಸಂಶೋಧಕ, ಸಾಹಿತಿ ಕಲ್ಬುರ್ಗಿ ಹತ್ಯೆ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಯುವಕನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಭುವಿತ್ ಶೆಟ್ಟಿ ಎಂಬ ಯುವಕ ಕಲ್ಬುರ್ಗಿ ಹತ್ಯೆ ಬಗ್ಗೆ ಟ್ವೀಟ್ ಮಾಡಿ, ಹಿಂದೂ ಧರ್ಮವನ್ನು ಅವಹೇಳನ ಮಾಡಿದ ಸಾಹಿತಿಗಳು ಒಬ್ಬೊಬ್ಬರೇ ಸಾವನ್ನಪ್ಪುತ್ತಿದ್ದಾರೆ. ಅಂದು ಯುಆರ್ ಅನಂತಮೂರ್ತಿ, ಇಂದು ಎಂಎಂ ಕಲ್ಬುರ್ಗಿ, ಮುಂದಿನ ಸರದಿ ಕೆ.ಎಸ್ ಭಗವಾನ್ ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಕ್ರೈಂ ಬ್ರಾಂಚ್ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಕಲ್ಬುರ್ಗಿ ಅವರ ಹತ್ಯೆ ಮಾಡಿದ ಕೊಲೆಗಾರರನ್ನು ಬಂಧಿಸಲು ಕಾರ್ಯಾಚರಣೆ ನಡೆಯುತ್ತಿರುವಾಗಲೇ ಭುವಿತ್ ಶೆಟ್ಟಿ, ವಿವಾದಾತ್ಮಕ ಟ್ವೀಟ್ ಮಾಡಿದ್ದಾನೆ. ಅಲ್ಲದೆ ಮುಂದಿನ ಸರದಿ ಕೆ.ಎಸ್ ಭಗವಾನ್ ಅವರದ್ದು ಎಂದು ಎಚ್ಚರಿಕೆ ನೀದಿರುವುದರಿಂದ ಪೊಲೀಸರು ಈತನ ಟ್ವೀಟ್ ನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com